Basavaraju Hinkal statement on caste census karnataka
ಮೈಸೂರು: ರಾಜ್ಯದಲ್ಲಿ ಈಗ ನಡೆದಿರುವ ಜಾತಿ ಗಣತಿ ಸಮೀಕ್ಷೆ ಅವೈಜ್ಞಾನಿಕ ಎಂದು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಿನಕಲ್ ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತಿಗಣತಿ ವರದಿ ಸಮೀಕ್ಷೆ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೀರಶೈವ ಜನಸಂಖ್ಯೆ ಸುಮಾರು ಒಂದೂವರೆಯಿಂದ ಎರಡು ಕೋಟಿ ಇದೆ. ರಾಜ್ಯದಲ್ಲಿ ನಾವೇ ನಿರ್ಣಾಯಕ. ನಾವು ಯಾವ ಕಡೆ ವಾಲುತ್ತೇವೆ ಅವರಿಗೆ ಅಧಿಕಾರ. ಈಗ ನಡೆಸಿರುವ ಜಾತಿ ಗಣತಿ ಸಮೀಕ್ಷೆ ಅವೈಜ್ಞಾನಿಕ. ನಮ್ಮ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶ್ಯಾಮನೂರು ಶಿವಶಂಕರಪ್ಪನವರು ಈಗಾಗಲೇ ಪ್ರತ್ಯೇಕ ಸಮೀಕ್ಷೆ ನಡೆಸುತ್ತೇವೆ ಎಂದಿದ್ದಾರೆ.
ಅವರ ನಿಲುವಿಗೆ ನಾವು ಬದ್ಧ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ರೀತಿ ನಿರ್ಧಾರಕ್ಕೆ ಕೈ ಹಾಕಿದ್ದಾರೆ. ಇದು ವೈಜ್ಞಾನಿಕ ಸಮೀಕ್ಷೆ ಅಲ್ಲ ಸರ್ಕಾರದ ಈ ಜಾತಿ ಬಿಡುಗಡೆ ವರದಿಯ ದುಸ್ಸಾಹಕ್ಕೆ ಕೈಹಾಕುವುದನ್ನ ಬಿಡಬೇಕು.
ಇಲ್ಲ ಅಂದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…