ಮೈಸೂರು ನಗರ

ಶ್ರೀ ಕೃಷ್ಣನ ವಿಚಾರಧಾರೆಗಳು ಪ್ರೇರಣೆಯಾಗಲಿ : ರವಿ ಶಾಸ್ತ್ರಿ

ಮೈಸೂರು: ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಜೀವನ ಸಾರವನ್ನು ತಿಳಿಸುತ್ತದೆ, ಶಿಷ್ಟರ ರಕ್ಷಣೆಗಾಗಿ ದುಷ್ಟರ ಸಂಹಾರ ಮಾಡುವ ಮೂಲಕ ಶ್ರೀಕೃಷ್ಣ ಬಾಲ್ಯದ ಲೀಲೆಗಳು ಮಕ್ಕಳಿಗೆ ಪ್ರೇರಣದಾಯಕವಾಗಲಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ ಹೇಳಿದರು.

ನಗರದ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಮತ್ತು ಶ್ರೀ ಕೃಷ್ಣ ಟ್ರಸ್ಟ್ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಗೆ ಕೃಷ್ಣ ರಾಧೆ ವೇಷಭೂಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಮಹಾಭಾರತ ರಾಮಾಯಣ ಹಾಗೂ ಇತಿಹಾಸ ಪುರುಷರ ಜೀವನ ಚರಿತ್ರೆಗಳನ್ನು ತಿಳಿಸುವ ಕೊಡುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪೋಷಕರ ಜವಾಬ್ದಾರಿಯಾಗಿದೆ. ಕಲಿಕೆಯಲ್ಲಿ ಮಕ್ಕಳಿಗೆ ಉತ್ತಮ ನೀತಿ ಪಾಠಗಳು ಹಾಗೂ ಶ್ರೀ ಕೃಷ್ಣ ಲೋಕಕಲ್ಯಾಣಕ್ಕಾಗಿ ಮಾಡಿದ ಸಾಧನೆಗಳ ಬಗ್ಗೆ ತಿಳುವಳಿಕೆ ಮಾಡಿಸಬೇಕು ಎಂದರು

ನೂರಕ್ಕೂ ಹೆಚ್ಚು ಮಕ್ಕಳು ಶ್ರೀ ಕೃಷ್ಣ ಮತ್ತು ರಾಧೆಯ ವೇಷಭೂಷಣ ಧರಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಉತ್ತಮವಾಗಿ ಶ್ರೀ ಕೃಷ್ಣ , ರಾಧೆ ವೇಷಧರಿಸಿದ ಮಕ್ಕಳಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ಸ್ಪರ್ಧಿಸಿದ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಲಾಯಿತು

ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ, ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷರಾದ ಪ್ರವೀಣ್ ರಾವ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ, ಕಾರ್ಯದರ್ಶಿ ರಾಘವೇಂದ್ರ, ಶ್ರೀವತ್ಸ, ಮುರಳಿ, ಮಂಗಳ, ಹಾಗೂ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

2 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

2 hours ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

2 hours ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

2 hours ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

2 hours ago