ಮೈಸೂರು ನಗರ

ಬೆಟ್ಟದಪುರ ಪೊಲೀಸರು ನ್ಯಾಯಾಲಯವನ್ನು ಮಿಸ್ ಗೈಡ್ ಮಾಡಿದ್ದಾರೆ: ವಕೀಲ ಪಾಂಡು ಪೂಜಾರಿ

ಮೈಸೂರು: ಪತ್ನಿ ಕೊಲೆ ಆರೋಪದಡಿ ಪತಿ ಜೈಲುವಾಸ ಅನುಭವಿದ್ದು, ಐದು ವರ್ಷಗಳ ಬಳಿಕ ಲವರ್‌ ಜೊತೆ ಪತ್ನಿ ಪತ್ತೆಯಾದ ಕೇಸ್ ವಿಚಾರ ಮತ್ತೆ ಕೋರ್ಟ್‌ ಮೊರೆ ಹೋಗಿದ್ದು, ಬೆಟ್ಟದಪುರ ಪೊಲೀಸರು ನ್ಯಾಯಾಲಯವನ್ನು ಮಿಸ್ ಗೈಡ್ ಮಾಡಿದ್ದಾರೆ ಎಂದು ವಕೀಲ ಪಾಂಡು ಪೂಜಾರಿ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಕೀಲ ಪಾಂಡು ಪೂಜಾರಿ, ಬೆಟ್ಟದಪುರ ಪೊಲೀಸರು ಬೇರೆ ಮಹಿಳೆ ಸ್ಕೆಲಿಟನ್ ಅನ್ನು ಮಲ್ಲಿಗೆ ಎಂದು ಜಾರ್ಜ್‌ಶೀಟ್ ಫೈಲ್ ಮಾಡಿದ್ದಾರೆ. ಸರಿಯಾಗಿ ವಿಚಾರಣೆ ನಡೆಸದೇ, ಕೇವಲ ಊಹಾಪೋಹವಾಗಿ ತನಿಖೆ ಮಾಡಿದ್ದಾರೆ. ನನ್ನ ಕಕ್ಷಿದಾರ ಮಾಡದ ತಪ್ಪಿಗೆ ಎರಡು ವರ್ಷ ಶಿಕ್ಷೆ ಅನುಭವಿಸಿದ್ದಾನೆ. ಆದ್ದರಿಂದ ನನ್ನ ಕಕ್ಷಿದಾರನಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ಮುಂದುವರೆದು ಮಾತನಾಡಿದ ವಕೀಲರು, ಸಿಕ್ಕ ಮೃತ ದೇಹ ಯಾರದ್ದು? ಅವರದ್ದೂ ಕೊಲೆಯೋ ಅಥವಾ ಆತ್ಮಹತ್ಯೆಯೋ ಈ ಬಗ್ಗೆ ಎಲ್ಲಾ ತನಿಖೆ ಮಾಡಿ ಇದೇ ತಿಂಗಳ 17ನೇ ತಾರೀಖಿನೊಳಗೆ ವರದಿ ಕೊಡಿ ಎಂದು ಎಸ್ಪಿ ವಿಷ್ಣುವರ್ಧನ್‌ರಿಗೆ ಕೋರ್ಟ್ ಸೂಚನೆ ಕೊಟ್ಟಿದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

31 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

44 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

1 hour ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago