ಮೈಸೂರು: ಪತ್ನಿ ಕೊಲೆ ಆರೋಪದಡಿ ಪತಿ ಜೈಲುವಾಸ ಅನುಭವಿದ್ದು, ಐದು ವರ್ಷಗಳ ಬಳಿಕ ಲವರ್ ಜೊತೆ ಪತ್ನಿ ಪತ್ತೆಯಾದ ಕೇಸ್ ವಿಚಾರ ಮತ್ತೆ ಕೋರ್ಟ್ ಮೊರೆ ಹೋಗಿದ್ದು, ಬೆಟ್ಟದಪುರ ಪೊಲೀಸರು ನ್ಯಾಯಾಲಯವನ್ನು ಮಿಸ್ ಗೈಡ್ ಮಾಡಿದ್ದಾರೆ ಎಂದು ವಕೀಲ ಪಾಂಡು ಪೂಜಾರಿ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಕೀಲ ಪಾಂಡು ಪೂಜಾರಿ, ಬೆಟ್ಟದಪುರ ಪೊಲೀಸರು ಬೇರೆ ಮಹಿಳೆ ಸ್ಕೆಲಿಟನ್ ಅನ್ನು ಮಲ್ಲಿಗೆ ಎಂದು ಜಾರ್ಜ್ಶೀಟ್ ಫೈಲ್ ಮಾಡಿದ್ದಾರೆ. ಸರಿಯಾಗಿ ವಿಚಾರಣೆ ನಡೆಸದೇ, ಕೇವಲ ಊಹಾಪೋಹವಾಗಿ ತನಿಖೆ ಮಾಡಿದ್ದಾರೆ. ನನ್ನ ಕಕ್ಷಿದಾರ ಮಾಡದ ತಪ್ಪಿಗೆ ಎರಡು ವರ್ಷ ಶಿಕ್ಷೆ ಅನುಭವಿಸಿದ್ದಾನೆ. ಆದ್ದರಿಂದ ನನ್ನ ಕಕ್ಷಿದಾರನಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.
ಮುಂದುವರೆದು ಮಾತನಾಡಿದ ವಕೀಲರು, ಸಿಕ್ಕ ಮೃತ ದೇಹ ಯಾರದ್ದು? ಅವರದ್ದೂ ಕೊಲೆಯೋ ಅಥವಾ ಆತ್ಮಹತ್ಯೆಯೋ ಈ ಬಗ್ಗೆ ಎಲ್ಲಾ ತನಿಖೆ ಮಾಡಿ ಇದೇ ತಿಂಗಳ 17ನೇ ತಾರೀಖಿನೊಳಗೆ ವರದಿ ಕೊಡಿ ಎಂದು ಎಸ್ಪಿ ವಿಷ್ಣುವರ್ಧನ್ರಿಗೆ ಕೋರ್ಟ್ ಸೂಚನೆ ಕೊಟ್ಟಿದೆ ಎಂದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…