ಮೈಸೂರು ನಗರ

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ!

ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್ ಮಾಡಿದ್ದು, ಪ್ರಾಯೋಗಿಕವಾಗಿ ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಕಾಂಪೌಂಡ್‌ಗೆ ರಿಫ್ಲಕ್ಷನ್ ಕನ್ನಡಿ ಅಳವಡಿಸಲಾಗಿದೆ.

80 ಮೀಟರ್ ಕಾಂಪೌಂಡ್‌ಗೆ ಸ್ಟೇನ್ ಲೆಸ್ ಸ್ಟೀಲ್ ರಿಫ್ಲೆಕ್ಷನ್ ಅಳವಡಿಸಿದ್ದು ಸ್ಟೇನ್ ಲೆಸ್ ಸ್ಟೀಲ್ ಮೂಲಕ ಕನ್ನಡಿ‌ಯ ಮಾದರಿ ಪ್ರತಿಬಿಂಬ ಕಾಣುವಂತೆ ಉಪಾಯ ಮಾಡಲಾಗಿದೆ.

ಅದರ‌ ಮುಂದೆ ನಿಂತರೆ ಸಂಪೂರ್ಣ ಚಿತ್ರಣ ಹಿಂಬದಿಯವರಿಗೆ ಕಾಣುವಂತೆ ಮಾಡಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಗಬ್ಬು ವಾಸನೆ ತರುತ್ತಿದ್ದವರನ್ನು‌ ತಡೆಯಲು ಈ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.

ಕನ್ನಡಿಯ ಸುತ್ತ ಎಲ್ಇಡಿ ಲೈಟ್ ಕೂಡಾ ಇದ್ದು, ಸಂಜೆ ವೇಳೆ ಸ್ಟ್ರೀಟ್ ಲೈಟ್ ಹೊತ್ತಿಕೊಳ್ಳುತ್ತಿದ್ದಂತೆ ಬಲ್ಬ್ ಕೂಡ ಆನ್ ಆಗುತ್ತದೆ. ಸುಮಾರು 9.5 ಲಕ್ಷ ವೆಚ್ಚದಲ್ಲಿ ಜಾರಿಗೆ ತಂದಿರುವ ಈ ಯೋಜನೆ ಸದ್ಯಕ್ಕೆ ಮೈಸೂರಿನಲ್ಲಿ ಮೊದಲು ಜಾರಿಯಾಗಿದೆ. ನಗರ ಪಾಲಿಕೆಯ ನೂತನ ಪ್ಲಾನ್‌ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಗೋಡೆ ಕಂಡೊಡನೆ ಮೂತ್ರಿಸುವವರು ಮಾತ್ರ ಇನ್ಮುಂದೆ ಯೋಚಿಸಬೇಕಾಗಿದೆ!

 

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

10 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

10 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

12 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

13 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

16 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

16 hours ago