ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ!
ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್ ಮಾಡಿದ್ದು, ಪ್ರಾಯೋಗಿಕವಾಗಿ ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಕಾಂಪೌಂಡ್ಗೆ ರಿಫ್ಲಕ್ಷನ್ ಕನ್ನಡಿ ಅಳವಡಿಸಲಾಗಿದೆ.
80 ಮೀಟರ್ ಕಾಂಪೌಂಡ್ಗೆ ಸ್ಟೇನ್ ಲೆಸ್ ಸ್ಟೀಲ್ ರಿಫ್ಲೆಕ್ಷನ್ ಅಳವಡಿಸಿದ್ದು ಸ್ಟೇನ್ ಲೆಸ್ ಸ್ಟೀಲ್ ಮೂಲಕ ಕನ್ನಡಿಯ ಮಾದರಿ ಪ್ರತಿಬಿಂಬ ಕಾಣುವಂತೆ ಉಪಾಯ ಮಾಡಲಾಗಿದೆ.
ಅದರ ಮುಂದೆ ನಿಂತರೆ ಸಂಪೂರ್ಣ ಚಿತ್ರಣ ಹಿಂಬದಿಯವರಿಗೆ ಕಾಣುವಂತೆ ಮಾಡಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಗಬ್ಬು ವಾಸನೆ ತರುತ್ತಿದ್ದವರನ್ನು ತಡೆಯಲು ಈ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.
ಕನ್ನಡಿಯ ಸುತ್ತ ಎಲ್ಇಡಿ ಲೈಟ್ ಕೂಡಾ ಇದ್ದು, ಸಂಜೆ ವೇಳೆ ಸ್ಟ್ರೀಟ್ ಲೈಟ್ ಹೊತ್ತಿಕೊಳ್ಳುತ್ತಿದ್ದಂತೆ ಬಲ್ಬ್ ಕೂಡ ಆನ್ ಆಗುತ್ತದೆ. ಸುಮಾರು 9.5 ಲಕ್ಷ ವೆಚ್ಚದಲ್ಲಿ ಜಾರಿಗೆ ತಂದಿರುವ ಈ ಯೋಜನೆ ಸದ್ಯಕ್ಕೆ ಮೈಸೂರಿನಲ್ಲಿ ಮೊದಲು ಜಾರಿಯಾಗಿದೆ. ನಗರ ಪಾಲಿಕೆಯ ನೂತನ ಪ್ಲಾನ್ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಗೋಡೆ ಕಂಡೊಡನೆ ಮೂತ್ರಿಸುವವರು ಮಾತ್ರ ಇನ್ಮುಂದೆ ಯೋಚಿಸಬೇಕಾಗಿದೆ!
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…