ಮೈಸೂರು ನಗರ

ಬೂಕರ್‌ ಪ್ರಶಸ್ತಿ ಬಂದಿದ್ದು ನನಗೂ ತುಂಬಾ ಖುಷಿ ತಂದಿದೆ: ಬಾನು ಮುಷ್ತಾಕ್‌

ಮೈಸೂರು: ನನಗೆ ಬೂಕರ್‌ ಪ್ರಶಸ್ತಿ ಬಂದು ಎರಡು ತಿಂಗಳಾಗಿದ್ದು, ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ ಎಂದು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು, ಪ್ರಶಸ್ತಿ ಬಂದು ಎರಡು ತಿಂಗಳು ಆಯ್ತು. ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ. ನನಗೂ ತುಂಬಾ ಖುಷಿ ಆಗಿದೆ. ಸುತ್ತೂರು ಮಠದವರು ನನ್ನನ್ನು ಯಾವಾಗಲೂ ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಅದಕ್ಕಾಗಿ ಈಗಲೂ ನನ್ನನ್ನು ಕರೆದು ಸನ್ಮಾನ ಮಾಡಿದ್ದಾರೆ. ಹಾಗಾಗಿ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.

ಇನ್ನು ಈ ಬಾರಿ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೂಸು ಹುಟ್ಟೋ ಮೊದಲೇ ಕುಲಾವಿ ಒಲೆಸಬಾರದು. ಈ ಬಗ್ಗೆ ನನಗೆ ಏನೂ ಕೂಡ ಗೊತ್ತಿಲ್ಲ ಎಂದು ಹೇಳಿದರು.

ಇನ್ನು ಬೂಕರ್‌ ಪ್ರಶಸ್ತಿ ಬಂದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ ಮಾಡಿದ್ರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಅವರು ವಿಶ್ ಮಾಡಿಲ್ಲ. ವಿಶ್ ಮಾಡ್ತಾರೆ ಅನ್ಕೊಂಡಿದ್ದೀನಿ ಎಂದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago