ಮೈಸೂರು ನಗರ

ಪ್ರಾಚ್ಯವಿದ್ಯಾ ಸಂಶೋಧನಾಲಯ ಉತ್ಕೃಷ್ಠ ಜ್ಞಾನ ಗ್ರಂಥಗಳನ್ನು ಪ್ರಕಟಿಸಲಿ : ಭಾರತೀ ಸ್ವಾಮೀಜಿ ಆಶಯ

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ ಶಾರದಾ ಪೀಠಾಧಿಶ್ವರ ಶ್ರೀವಿಧು ಶೇಖರ ಭಾರತೀ ಸ್ವಾಮೀಜಿ ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯದಲ್ಲಿ ಸೋಮವಾರ ನಡೆದ ಗುರುವಂದನಾ ಸಮಾರಂಭ ಮತ್ತು ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಾಚೀನ ಕಾಲದ ಉತ್ತಮವಾದ ವಿದ್ಯೆಯ ವೈಶಿಷ್ಟ್ಯ, ಮಹಿಮೆಯನ್ನು ಪ್ರತಿಯೊಬ್ಬರೂ ಅರಿತುಕೊಂಡು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಪ್ರಾಚೀನ ಕಾಲದಿಂದ ಬಂದಿರುವ ಅತ್ಯಂತ ಉತ್ಕೃಷ್ಟ ವಿಚಾರಗಳ ಜ್ಞಾನ ಧಾರೆಯಾದ ತಾಳೆಗರಿಗಳನ್ನು ಪ್ರಾಚ್ಯವಿದ್ಯಾ ಸಂಶೋಧನಾಲಯ ಸಂರಕ್ಷಣೆ ಮಾಡಿ ಸಂಶೋಧನೆ ನಡೆಸಿ ಅಪ್ರಕಟಿತ ಅನೇಕ ಗ್ರಂಥಗಳನ್ನು ಪ್ರಕಟಿಸಿದ್ದು, ಮುಂದೆಯೂ ಉತ್ಕೃಷ್ಟ ಜ್ಞಾನದ ಗ್ರಂಥಗಳು ಪ್ರಕಟಿಸಬೇಕು ಎಂದು ಹೇಳಿದರು.

ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳಲ್ಲಿ ಸಿಗುವ ಜ್ಞಾನದಿಂದ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬಹುದು. ಆದರೆ, ಹೆಚ್ಚಿನ ಜನರು ಲೌಕಿಕ ವಿಚಾರಗಳಿಂದ ಜೀವನವನ್ನು ಸಾರ್ಥ ಮಾಡಿಕೊಳ್ಳಬಹುದು ಎಂದು ಆಸಕ್ತಿ ಹೊಂದಿದ್ದಾರೆ. ಲೌಕಿಕ ವಿಚಾರಗಳನ್ನು ತಿಳಿದುಕೊಂಡರೆ ಸಾಕು ಎಂದು ಭ್ರಮಿಸಿದ್ದಾರೆ. ಶರೀರ ಹೊರ ಭಾಗ ಚೆನ್ನಾಗಿ ಅಲಂಕಾರ ಮಾಡಿಕೊಂಡರೆ ದೇಹ ಆರೋಗ್ಯವಾಗಿರುವುದಿಲ್ಲ. ಹೊರಗಿನ ಅಲಂಕಾರದಿಂದ ದೇಹ ಚಲಿಸುವುದಿಲ್ಲ. ದೇಹದೊಳಗಿನ ಹೃದಯವೂ ಆರೋಗ್ಯವಾಗಿದ್ದರೆ ನಮ್ಮ ಶರೀರ ಚೆನ್ನಾಗಿರಲಿದೆ. ಹೀಗಾಗಿ ಪ್ರಾಚೀನ ವಿದ್ಯೆ ಮನಸ್ಸಿನ ಆರೋಗ್ಯ ಕಾಯಲಿವೆ. ಪ್ರಾಚೀನ ಗ್ರಂಥಗಳ ಮಹಿಮೆ ತಿಳಿದುಕೊಳ್ಳುವುದು ಸಾಮಾನ್ಯವಿಚಾರವಲ್ಲ. ಜೀವನ ಸಾರ್ಥಕವಾದ ವಿಚಾರಗಳು ಈ ಗ್ರಂಥಗಳಲ್ಲಿವೆ ಎಂದರು.

ಇದನ್ನೂ ಓದಿ:-ಮೈಸೂರು | ಸೆಸ್ಕ್ ಕಚೇರಿಯಲ್ಲಿ ಮೇಲ್ದರ್ಜೆಗೇರಿಸಿದ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ಹಿಂದಿನವರು ಆಧುನಿಕ ವ್ಯವಸ್ಥೆ ಇಲ್ಲದಿರುವ ಕಾಲದಲ್ಲಿ ಕಷ್ಟಪಟ್ಟು ತಾಳಪಾತ್ರಗಳನ್ನು ರಚಿಸಿ ಬುದ್ಧಿಯಲ್ಲಿ ಧಾರಣೆ ಮಾಡಿಕೊಂಡು ಮುಂದಿನ ಪೀಳಿಗೆಗೆ ಸಿಗಬೇಕು ಎಂಬ ದೃಷ್ಟಿಯಿಂದ ಪರಂಪರೆಯ ವಿದ್ಯೆಯನ್ನು ಸಂರಕ್ಷಣೆ ಮಾಡಿಕೊಂಡು ಬರಲಾಗಿದೆ. ಇವುಗಳನ್ನು ಉಳಿಸಿಕೊಳ್ಳುವ ಕರ್ತವ್ಯ ನಮ್ಮದಾಗಬೇಕು ಎಂದು ಕಿವಿಮಾತು ಹೇಳಿದರು.

ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮಾತನಾಡಿ, ಪ್ರಾಚ್ಯವಿದ್ಯಾ ಸಂಶೋಧನಾಲಯ ಕಟ್ಟಡ ಹಳೆಯದು ಗ್ರಂಥಗಳು ಕೂಡ ಹಳೆಯದಾಗಿವೆ. ಇವುಗಳನ್ನು ನಿರ್ವಹಣೆ ಮಾಡಲು ವಿವಿಗೆ ಕಷ್ಟವಾಗುತ್ತಿತ್ತು. ಅಂತಹ ಸಂದರ್ಭದಲ್ಲಿ ಶೃಂಗೇರಿ ಮಠದಿಂದ ಒಂದು ಕೋಟಿ ರೂ.ಹಣವನ್ನು ನೀಡಿ ನಿರ್ವಹಣೆಗೆ ನೆರವು ನೀಡಿರುವುದು ಡಿಜಿಟಲೀಕರಣಕ್ಕೆ ಅನುಕೂಲವಾಗಿದೆ. ಗುರುಗಳು ಆರ್ಶೀವಾದ ಮತ್ತು ದಾನಿಗಳ ಸಹಾಯಹಸ್ತದಿಂದ ಇನ್ನೂ ಅಭಿವೃದ್ಧಿಯಾಗಲಿದೆ. ಶೃಂಗೇರಿ ಮಠದಿಂದ ನಮಗೆ ಅನುದಾನ ಬಂದಿರುವುದು ಸಂತೋಷದ ಸಂಗತಿ. ಇದಕ್ಕೆ ವಿವಿಯೂ ಅಭಾರಿಯಾಗಿದೆ ಎಂದರು.

ವಿದ್ವಾನ್ ಹರಿಫಣಿ ರಾಜದತ್ತ ಮತ್ತು ತಂಡದವರು ವೇದಘೋಷ ಮಾಡಿದರು. ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕ ಡಾ.ಡಿ.ಪಿ.ಮಧು ಸೂದನಾಚಾರ್ಯ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಮೈಸೂರು ವಿವಿ ಕುಲಸಚಿವರಾದ ಎಂ.ಕೆ.ಸವಿತಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜು ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

11 mins ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

57 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

60 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

4 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

4 hours ago