bhaskar rao
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂಟಲಿಜೆನ್ಸ್ ಮುಖ್ಯಸ್ಥರನ್ನು ಅಮಾನತು ಮಾಡದೇ ವರ್ಗಾವಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು, ಈ ವಿಚಾರವನ್ನು ಖುರ್ಚಿಯ ಮೇಲೆ ಕುಳಿತ ದೊರೆಯನ್ನೇ ಕೇಳಬೇಕು. ಸಿಕ್ಕ ಸಿಕ್ಕವರಿಗೂ ಕೂಡ ಸುಣ್ಣ ಹಾಕಬೇಕು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಸರಿಯಲ್ಲ. ಸಿಎಂಗೆ ಯಾರು ಅಡ್ವೈಸ್ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಇದನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸುವುದು ಬೇಡ. ಮೂರು ತಿಂಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇನ್ನು ಪೊಲೀಸ್ ಅಧಿಕಾರಿಗಳ ತಲೆದಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರನ್ನಾದರೂ ಬಲಿಪಶು ಮಾಡಬೇಕಿತ್ತು. ಅದಕ್ಕೆ ಸರ್ಕಾರ ಯಾರನ್ನಾದರೂ ಹೊಣೆ ಮಾಡಬೇಕಿತ್ತು. ಒಂದು ಮಾಂಸದ ತುಂಡು ಬಿಸಾಕಿದಂತೆ ಬಿಸಾಕಿದ್ದಾರೆ. ದಯಾನಂದ್ ಉತ್ತಮ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ಅಮಾನತ್ತು ಮಾಡಿದ್ದು ಸರಿಯಲ್ಲ.
ಇದನ್ನೂ ಓದಿ:- ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಎಚ್.ಡಿ.ಕುಮಾರಸ್ವಾಮಿ ಆಗ್ರಹ
ಒಬ್ಬ ಪುಟಗೋಸಿ ನನ್ ಮಗನ ಮಾತು ಕೇಳ್ತೀರಿ. ಅವನು ಲಂಡನ್ಗೆ ಹೋಗಬೇಕು ಎಂದು ನೀವು ಅವನ ಮಾತು ಕೇಳ್ತೀರಿ? ನೀವು ಅವನನ್ನು ಕೇಳಿ ಕಾರ್ಯಕ್ರಮ ಆಯೋಜನೆ ಮಾಡ್ತೀರಿ?ನಿಮ್ಮ ಜುಟ್ಟನ್ನು ಅವನ ಕೈಗೆ ಯಾಕೆ ಕೊಡ್ತೀರಿ? ಯಾವುದೇ ಪ್ಲಾನ್ ಮಾಡದೇ ಕಾರ್ಯಕ್ರಮ ರೂಪಿಸಿದ್ದೀರಿ. ಇದಕ್ಕೆಲ್ಲ ಸರ್ಕಾರವೇ ನೇರ ಹೊಣೆ ಎಂದು ಕಿಡಿಕಾರಿದರು.
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…