ಮೈಸೂರು ನಗರ

ಇಡಿಯಿಂದ ಸಿಎಂ ಪತ್ನಿಗೆ ಬಿಗ್‌ ರಿಲೀಫ್: ಮೈಸೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮಾಚರಣೆ

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮಾಚರಣೆ ಆಚರಿಸಿದ್ದಾರೆ.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ನಿನ್ನೆ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸಿದ್ದರಾಮಯ್ಯ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.

ನಗರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಭಾವಚಿತ್ರ ಹಿಡಿದು ಸತ್ಯ ಮೇವ ಜಯತೆ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಆಚರಣೆ ಮಾಡಿದರು.

ಮಾಜಿ ಮುಡಾ ಅಧ್ಯಕ್ಷ ರಾಜೀವ್ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗಿದ್ದರು. ಇನ್ನು ವಿಶೇಷವೆಂದರೆ ಸಂಭ್ರಮಾಚರಣೆ ವೇಳೆ ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಬಿಜೆಪಿ ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌ ಅವರಿಗೂ ಸಿಹಿ ಹಂಚಿ ಖುಷಿಪಟ್ಟರು.

ಆಂದೋಲನ ಡೆಸ್ಕ್

Recent Posts

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

1 min ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

16 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago