ಮೈಸೂರು ನಗರ

ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿಗೆ ಬಿಗ್ ರಿಲೀಫ್ ವಿಚಾರ: ಸ್ನೇಹಮಯಿ ಕೃಷ್ಣ ಹೇಳಿದ್ದಿಷ್ಟು.!

 

ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ಸುಪ್ರೀಂಕೋರ್ಟ್ ಹಲವು ಪ್ರಕರಣದ ಬಗ್ಗೆ ತರಾಟೆಗೆ ತೆಗೆದುಕೊಂಡಿದೆ. ಇಡಿ ಈ ಪ್ರಕರಣಕ್ಕೆ ಮಾತ್ರ ತರಾಟೆಗೆ ತೆಗೆದುಕೊಂಡಿಲ್ಲ. ಪಾರ್ವತಿ ಸಿದ್ದರಾಮಯ್ಯ ಇಡಿ ಮುಂದೆ ಯಾಕೆ ಹಾಜರಾಗಿ ವಿಚಾರಣೆ ಎದುರಿಸುತ್ತಿಲ್ಲ. ಇಡಿ ನೋಟಿಸ್ ಕೊಟ್ಟರೆ ಸುಪ್ರೀಂಕೋರ್ಟ್ ಮೊರೆ ಹೋಗುತ್ತಾರೆ. ಹಾಗಾದ್ರೆ ಲೋಕಾಯುಕ್ತ ಅಧಿಕಾರಿಗಳ ಜೊತೆ ಮೊದಲೇ ಮಾತುಕತೆ ಮಾಡಿಕೊಂಡು ವಿಚಾರಣೆಗೆ ಹಾಜರಾಗಿದ್ರಾ? ಎಂದು ಸಿಎಂ ಪತ್ನಿ ಪಾರ್ವತಿಗೆ ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇಕೆ? ಇಡೀ ಮುಡಾ ಪ್ರಕರಣವನ್ನ ಸುಪ್ರೀಂಕೋರ್ಟ್ ರದ್ದುಗೊಳಿಸಿಲ್ಲ. ಇಡಿ ನೋಟಿಸ್ ಕೊಟ್ಟಿರುವುದು ತಪ್ಪು ಅನ್ನುವುದಾದರೇ ತನಿಖೆ ಸಂಸ್ಥೆಗಳು ವಿಚಾರಣೆ ಮಾಡುವುದೇ ತಪ್ಪಾ.? ಆರೋಪಿಗಳ ಮನಸ್ಥಿತಿ ಹೇಗಿದೆ ಎಂಬುದು ಇಲ್ಲೇ ಗೊತ್ತಾಗಲಿದೆ. ಇನ್ನು ಮುಂದೆ ಕಾನೂನಾತ್ಮಕವಾದ ಹೋರಾಟ ಮುಂದುವರೆಯುತ್ತದೆ. ನನ್ನ ಹೋರಾಟ ಯಾವುದೇ ಕಾರಣಕ್ಕೆ ನಿಲ್ಲುವುದಿಲ್ಲ. ಸ್ನೇಹಮಯಿ ಕೃಷ್ಣನ ಬಳಿ ಸಾಕಷ್ಟು ದಾಖಲೆಗಳು ಇದೆ ಅನ್ನೋ ಕಾರಣಕ್ಕೆ ವಿಚಾರಣೆಗೆ ಬರುತ್ತಿಲ್ಲ. ಈ ವಿಚಾರ ಇಡೀ ದೇಶದ ಜನರಿಗೆ ಗೊತ್ತಿದೆ. ತನಿಖಾ ಸಂಸ್ಥೆಗಳು ಯಾವ ರೀತಿ ತನಿಖೆ ಮಾಡಬೇಕು ಎಂಬುದನ್ನು ನ್ಯಾಯಾಲಯ ತಿಳಿಸಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

2 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

2 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

4 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

4 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

5 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

6 hours ago