ಮೈಸೂರು ನಗರ

ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿಗೆ ಬಿಗ್ ರಿಲೀಫ್ ವಿಚಾರ: ಸ್ನೇಹಮಯಿ ಕೃಷ್ಣ ಹೇಳಿದ್ದಿಷ್ಟು.!

 

ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ಸುಪ್ರೀಂಕೋರ್ಟ್ ಹಲವು ಪ್ರಕರಣದ ಬಗ್ಗೆ ತರಾಟೆಗೆ ತೆಗೆದುಕೊಂಡಿದೆ. ಇಡಿ ಈ ಪ್ರಕರಣಕ್ಕೆ ಮಾತ್ರ ತರಾಟೆಗೆ ತೆಗೆದುಕೊಂಡಿಲ್ಲ. ಪಾರ್ವತಿ ಸಿದ್ದರಾಮಯ್ಯ ಇಡಿ ಮುಂದೆ ಯಾಕೆ ಹಾಜರಾಗಿ ವಿಚಾರಣೆ ಎದುರಿಸುತ್ತಿಲ್ಲ. ಇಡಿ ನೋಟಿಸ್ ಕೊಟ್ಟರೆ ಸುಪ್ರೀಂಕೋರ್ಟ್ ಮೊರೆ ಹೋಗುತ್ತಾರೆ. ಹಾಗಾದ್ರೆ ಲೋಕಾಯುಕ್ತ ಅಧಿಕಾರಿಗಳ ಜೊತೆ ಮೊದಲೇ ಮಾತುಕತೆ ಮಾಡಿಕೊಂಡು ವಿಚಾರಣೆಗೆ ಹಾಜರಾಗಿದ್ರಾ? ಎಂದು ಸಿಎಂ ಪತ್ನಿ ಪಾರ್ವತಿಗೆ ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇಕೆ? ಇಡೀ ಮುಡಾ ಪ್ರಕರಣವನ್ನ ಸುಪ್ರೀಂಕೋರ್ಟ್ ರದ್ದುಗೊಳಿಸಿಲ್ಲ. ಇಡಿ ನೋಟಿಸ್ ಕೊಟ್ಟಿರುವುದು ತಪ್ಪು ಅನ್ನುವುದಾದರೇ ತನಿಖೆ ಸಂಸ್ಥೆಗಳು ವಿಚಾರಣೆ ಮಾಡುವುದೇ ತಪ್ಪಾ.? ಆರೋಪಿಗಳ ಮನಸ್ಥಿತಿ ಹೇಗಿದೆ ಎಂಬುದು ಇಲ್ಲೇ ಗೊತ್ತಾಗಲಿದೆ. ಇನ್ನು ಮುಂದೆ ಕಾನೂನಾತ್ಮಕವಾದ ಹೋರಾಟ ಮುಂದುವರೆಯುತ್ತದೆ. ನನ್ನ ಹೋರಾಟ ಯಾವುದೇ ಕಾರಣಕ್ಕೆ ನಿಲ್ಲುವುದಿಲ್ಲ. ಸ್ನೇಹಮಯಿ ಕೃಷ್ಣನ ಬಳಿ ಸಾಕಷ್ಟು ದಾಖಲೆಗಳು ಇದೆ ಅನ್ನೋ ಕಾರಣಕ್ಕೆ ವಿಚಾರಣೆಗೆ ಬರುತ್ತಿಲ್ಲ. ಈ ವಿಚಾರ ಇಡೀ ದೇಶದ ಜನರಿಗೆ ಗೊತ್ತಿದೆ. ತನಿಖಾ ಸಂಸ್ಥೆಗಳು ಯಾವ ರೀತಿ ತನಿಖೆ ಮಾಡಬೇಕು ಎಂಬುದನ್ನು ನ್ಯಾಯಾಲಯ ತಿಳಿಸಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

8 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

9 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

13 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

14 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

15 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

16 hours ago