big relief for the CM’s wife in the Supreme Court
ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ಸುಪ್ರೀಂಕೋರ್ಟ್ ಹಲವು ಪ್ರಕರಣದ ಬಗ್ಗೆ ತರಾಟೆಗೆ ತೆಗೆದುಕೊಂಡಿದೆ. ಇಡಿ ಈ ಪ್ರಕರಣಕ್ಕೆ ಮಾತ್ರ ತರಾಟೆಗೆ ತೆಗೆದುಕೊಂಡಿಲ್ಲ. ಪಾರ್ವತಿ ಸಿದ್ದರಾಮಯ್ಯ ಇಡಿ ಮುಂದೆ ಯಾಕೆ ಹಾಜರಾಗಿ ವಿಚಾರಣೆ ಎದುರಿಸುತ್ತಿಲ್ಲ. ಇಡಿ ನೋಟಿಸ್ ಕೊಟ್ಟರೆ ಸುಪ್ರೀಂಕೋರ್ಟ್ ಮೊರೆ ಹೋಗುತ್ತಾರೆ. ಹಾಗಾದ್ರೆ ಲೋಕಾಯುಕ್ತ ಅಧಿಕಾರಿಗಳ ಜೊತೆ ಮೊದಲೇ ಮಾತುಕತೆ ಮಾಡಿಕೊಂಡು ವಿಚಾರಣೆಗೆ ಹಾಜರಾಗಿದ್ರಾ? ಎಂದು ಸಿಎಂ ಪತ್ನಿ ಪಾರ್ವತಿಗೆ ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇಕೆ? ಇಡೀ ಮುಡಾ ಪ್ರಕರಣವನ್ನ ಸುಪ್ರೀಂಕೋರ್ಟ್ ರದ್ದುಗೊಳಿಸಿಲ್ಲ. ಇಡಿ ನೋಟಿಸ್ ಕೊಟ್ಟಿರುವುದು ತಪ್ಪು ಅನ್ನುವುದಾದರೇ ತನಿಖೆ ಸಂಸ್ಥೆಗಳು ವಿಚಾರಣೆ ಮಾಡುವುದೇ ತಪ್ಪಾ.? ಆರೋಪಿಗಳ ಮನಸ್ಥಿತಿ ಹೇಗಿದೆ ಎಂಬುದು ಇಲ್ಲೇ ಗೊತ್ತಾಗಲಿದೆ. ಇನ್ನು ಮುಂದೆ ಕಾನೂನಾತ್ಮಕವಾದ ಹೋರಾಟ ಮುಂದುವರೆಯುತ್ತದೆ. ನನ್ನ ಹೋರಾಟ ಯಾವುದೇ ಕಾರಣಕ್ಕೆ ನಿಲ್ಲುವುದಿಲ್ಲ. ಸ್ನೇಹಮಯಿ ಕೃಷ್ಣನ ಬಳಿ ಸಾಕಷ್ಟು ದಾಖಲೆಗಳು ಇದೆ ಅನ್ನೋ ಕಾರಣಕ್ಕೆ ವಿಚಾರಣೆಗೆ ಬರುತ್ತಿಲ್ಲ. ಈ ವಿಚಾರ ಇಡೀ ದೇಶದ ಜನರಿಗೆ ಗೊತ್ತಿದೆ. ತನಿಖಾ ಸಂಸ್ಥೆಗಳು ಯಾವ ರೀತಿ ತನಿಖೆ ಮಾಡಬೇಕು ಎಂಬುದನ್ನು ನ್ಯಾಯಾಲಯ ತಿಳಿಸಲಿ ಎಂದು ಆಗ್ರಹಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…