big relief for the CM’s wife in the Supreme Court
ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ಸುಪ್ರೀಂಕೋರ್ಟ್ ಹಲವು ಪ್ರಕರಣದ ಬಗ್ಗೆ ತರಾಟೆಗೆ ತೆಗೆದುಕೊಂಡಿದೆ. ಇಡಿ ಈ ಪ್ರಕರಣಕ್ಕೆ ಮಾತ್ರ ತರಾಟೆಗೆ ತೆಗೆದುಕೊಂಡಿಲ್ಲ. ಪಾರ್ವತಿ ಸಿದ್ದರಾಮಯ್ಯ ಇಡಿ ಮುಂದೆ ಯಾಕೆ ಹಾಜರಾಗಿ ವಿಚಾರಣೆ ಎದುರಿಸುತ್ತಿಲ್ಲ. ಇಡಿ ನೋಟಿಸ್ ಕೊಟ್ಟರೆ ಸುಪ್ರೀಂಕೋರ್ಟ್ ಮೊರೆ ಹೋಗುತ್ತಾರೆ. ಹಾಗಾದ್ರೆ ಲೋಕಾಯುಕ್ತ ಅಧಿಕಾರಿಗಳ ಜೊತೆ ಮೊದಲೇ ಮಾತುಕತೆ ಮಾಡಿಕೊಂಡು ವಿಚಾರಣೆಗೆ ಹಾಜರಾಗಿದ್ರಾ? ಎಂದು ಸಿಎಂ ಪತ್ನಿ ಪಾರ್ವತಿಗೆ ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇಕೆ? ಇಡೀ ಮುಡಾ ಪ್ರಕರಣವನ್ನ ಸುಪ್ರೀಂಕೋರ್ಟ್ ರದ್ದುಗೊಳಿಸಿಲ್ಲ. ಇಡಿ ನೋಟಿಸ್ ಕೊಟ್ಟಿರುವುದು ತಪ್ಪು ಅನ್ನುವುದಾದರೇ ತನಿಖೆ ಸಂಸ್ಥೆಗಳು ವಿಚಾರಣೆ ಮಾಡುವುದೇ ತಪ್ಪಾ.? ಆರೋಪಿಗಳ ಮನಸ್ಥಿತಿ ಹೇಗಿದೆ ಎಂಬುದು ಇಲ್ಲೇ ಗೊತ್ತಾಗಲಿದೆ. ಇನ್ನು ಮುಂದೆ ಕಾನೂನಾತ್ಮಕವಾದ ಹೋರಾಟ ಮುಂದುವರೆಯುತ್ತದೆ. ನನ್ನ ಹೋರಾಟ ಯಾವುದೇ ಕಾರಣಕ್ಕೆ ನಿಲ್ಲುವುದಿಲ್ಲ. ಸ್ನೇಹಮಯಿ ಕೃಷ್ಣನ ಬಳಿ ಸಾಕಷ್ಟು ದಾಖಲೆಗಳು ಇದೆ ಅನ್ನೋ ಕಾರಣಕ್ಕೆ ವಿಚಾರಣೆಗೆ ಬರುತ್ತಿಲ್ಲ. ಈ ವಿಚಾರ ಇಡೀ ದೇಶದ ಜನರಿಗೆ ಗೊತ್ತಿದೆ. ತನಿಖಾ ಸಂಸ್ಥೆಗಳು ಯಾವ ರೀತಿ ತನಿಖೆ ಮಾಡಬೇಕು ಎಂಬುದನ್ನು ನ್ಯಾಯಾಲಯ ತಿಳಿಸಲಿ ಎಂದು ಆಗ್ರಹಿಸಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…