ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮೈಸೂರು ಮುಡಾ ಹಗರಣಕ್ಕೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಸಿದ ಅರ್ಜಿ ಹೈಕೋರ್ಟ್ನಲ್ಲಿ ವಜಾ ಆಗುತ್ತಿದ್ದಂತೆ ಅರ್ಜಿದಾರ ಸ್ನೇಹಮಯಿ ಕೃಷ್ಣ, ಈ ಬಗ್ಗೆ ಮುಂದಿನ ವಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸುತ್ತೇನೆ ಎಂದು ಹೇಳಿದ್ದರು.
ಆದರೆ ಈಗ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ಸುಪ್ರೀಂಕೋರ್ಟ್ಗೆ ಯಾವುದೇ ಕಾರಣಕ್ಕೂ ಅರ್ಜಿ ಸಲ್ಲಿಸಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ. ಹೈಕೋರ್ಟ್ ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ, ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ ಹಿತೈಷಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತುಪಡಿಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದೆ ಎಂದು ಮಾಹಿತಿ ನೀಡಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…