ಮೈಸೂರು ನಗರ

ಮೈಸೂರಿನಲ್ಲಿ ಬೈಕ್ ಟ್ಯಾಕ್ಸಿ ಚಾಲಕರ ಸಭೆ : ಪ್ರತಿಭಟನೆಗೆ ನಿರ್ಧಾರ

ಮೈಸೂರು : ಮೈಸೂರು ನಗರದಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಸಂಘದ ವತಿಯಿಂದ ಇಂದು ನಗರದ ಒಂಟಿಕೊಪ್ಪಲ್ ನ ಚೆಲುವಾಂಬ ಪಾರ್ಕ್ ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರ ಸಭೆ ನಡೆಯಿತು.

ಸಂಘದ ಅಧ್ಯಕ್ಷ ಮಹಾದೇವ ನಾಯಕ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಬೈಕ್ ಟ್ಯಾಕ್ಸಿ ಚಾಲಕರುಗಳು ತಮ್ಮ ಕೋರಿಕೆಗಳನ್ನು ಮುಂದಿಟ್ಟು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.

ಮೈಸೂರಿನ ನಗರದಲ್ಲಿ ಸುಮಾರು 250ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಚಾಲಕರುಗಳಿದ್ದು, ಇವರುಗಳು ರಾಪಿಡ್ ಆಟೋ, ಉಬರ್ ಆಟೋ, ಓಲಾ ಆಟೋಗಳಂತೆ ತಮ್ಮ ಬೈಕುಗಳಲ್ಲಿ ಆನ್ಲೈನ್ ಮೂಲಕ ಬುಕ್ ಮಾಡಿದ ಗ್ರಾಹಕರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದುಕೊಂಡು ಹೋಗಿ ಬಿಡುವ ಕಾಯಕದಲ್ಲಿ ತೊಡಗಿಕೊಂಡಿರುತ್ತಾರೆ, ಇವರುಗಳು ಆನ್ಲೈನ್ ಮುಖಾಂತರ ಬುಕ್ ಮಾಡಿದ ಗ್ರಾಹಕರ ಸ್ಥಳಗಳಿಗೆ ತೆರಳಿ ಅವರನ್ನು ತಮ್ಮ ಬೈಕುಗಳಲ್ಲಿ ಕೂರಿಸಿಕೊಂಡು 3km ಗೆ 30 ರೂಪಾಯಿ ಮಾತ್ರ ಪ್ರಯಾಣ ದರ ತೆಗೆದುಕೊಂಡು ಗ್ರಾಹಕರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಾರೆ, ಇದರಿಂದ ಅವರ ಮತ್ತು ಅವರ ಕುಟುಂಬದ ಜೀವನ ಸಾಗುತ್ತದೆ.

ಇವರ ಈ ಕಾಯಕದಲ್ಲಿ ಸರ್ಕಾರಕ್ಕೂ ಕೂಡ ಜಿಎಸ್‌ಟಿ ತೆರಿಗೆ ರೂಪದಲ್ಲಿ ಹಣ ಪಾವತಿಸುತ್ತಾರೆ ಹೀಗಿರುವಾಗ ನ್ಯಾಯಾಲಯಗಳು ಬೈಕ್ ಟ್ಯಾಕ್ಸಿ ವೃತ್ತಿಯನ್ನು ರದ್ದುಗೊಳಿಸಲು ಆದೇಶ ಹೊರಡಿಸಿದೆ, ಇದರಿಂದ ನಮಗೆ ತುಂಬಾ ತೊಂದರೆ ಆಗಿದೆ. ನಮ್ಮ ಹೆಂಡತಿ ಮಕ್ಕಳ ಸಾಕಲು ತುಂಬಾ ಕಷ್ಟವಾಗುತ್ತದೆ. ಆದ್ದರಿಂದ ಸರ್ಕಾರ ನಮಗೆ ಬೇರೊಂದು ಪರಿಹಾರ ಮಾರ್ಗ ಒದಗಿಸಿಕೊಡಬೇಕು, ಇಲ್ಲದಿದ್ದರೆ ನ್ಯಾಯಾಲಯಕ್ಕೆ ಮನದಟ್ಟು ಮಾಡಿ ಬೈಕ್ ಟ್ಯಾಕ್ಸಿ ಓಡಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸುವುದಾಗಿ ಸಂಘದ ಅಧ್ಯಕ್ಷ ಮಹಾದೇವ ನಾಯಕ ತಿಳಿಸಿದರು.

ಈ ಬಗ್ಗೆ ನಮಗೆ ಬೈಕ್ ಟ್ಯಾಕ್ಸಿ ಓಡಿಸಲು ಅವಕಾಶ ಕೋರಿ ಅಥವಾ ನಮ್ಮ ಜೀವನಕ್ಕೆ ಪರ್ಯಾಯ ಹುದ್ದೆಯನ್ನು ಸೃಷ್ಟಿಸಿ ಕೊಡಬೇಕು ಎಂದು ಒತ್ತಾಯಿಸಿ ಈಗಾಗಲೇ ಮಾನ್ಯ ಸಾರಿಗೆ ಸಚಿವರು, ಮೈಸೂರಿನ ಶಾಸಕರುಗಳು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ನ್ಯಾಯಾಲಯವು ನಮ್ಮ ಈ ಮನವಿಯನ್ನು ಪರಿಷ್ಕರಿಸಿ ಬೈಕ್ ಟ್ಯಾಕ್ಸಿ ರದ್ದತಿ ಆದೇಶವನ್ನು ಹಿಂಪಡೆಯಬೇಕೆಂದು ಕೋರಿಕೊಂಡಿದ್ದೇವೆ, ಈ ತಿಂಗಳ 15ನೇ ತಾರೀಖಿನೊಳಗೆ ನಮಗೆ ನಿಖರವಾದ ಮಾಹಿತಿ ಬೇಕು. ನ್ಯಾಯ ಬೇಕು ಇಲ್ಲದಿದ್ದಲ್ಲಿ ಎಲ್ಲಾ 250 ಬೈಕ್ ಟ್ಯಾಕ್ಸಿ ಚಾಲಕರುಗಳು ಅವರವರ ಕುಟುಂಬದವರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.

ನಮ್ಮ ಬೈಕ್ ಟ್ಯಾಕ್ಸಿ ಸೇವೆಯಿಂದ ಅವಸರಕ್ಕೆ ಗ್ರಾಹಕರಿಗೆ ಉಪಯೋಗವಾಗುತ್ತದೆ, ಆಸ್ಪತ್ರೆಗಳಿಗೆ, ಕಚೇರಿಗಳಿಗೆ, ಬಸ್ ನಿಲ್ದಾಣ, ರೈಲು ನಿಲ್ದಾಣಗಳಿಂದ ತಮ್ಮ ಮನೆಗಳಿಗೆ ತೆರಳುವ ಗ್ರಾಹಕರು, ಮತ್ತು ಇತರೆ ಅವಸರ ಕೆಲಸಗಳಿಗೆ ತೆರಳುವ ಗ್ರಾಹಕರಗಳು ಕರೆ ಮಾಡಿದ ತಕ್ಷಣ ಅವರ ಇರುವ ಸ್ಥಳಗಳಿಗೆ ಹೋಗಿ ಅವರುಗಳನ್ನು ಅವರು ಹೇಳಿದ ಸ್ಥಳಗಳಿಗೆ ಸುರಕ್ಷಿತವಾಗಿ ಕರೆದೊಯ್ದು ಬಿಟ್ಟು ಬರುತ್ತೇವೆ ನಮ್ಮಿಂದ ಗ್ರಾಹಕರಿಗೆ ತೊಂದರೆ ಆಗುವುದಿಲ್ಲ. ಅವರ ಸುರಕ್ಷತೆಯೇ ನಮ್ಮ ಧ್ಯೇಯವಾಗಿರುತ್ತದೆ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿರುತ್ತೇವೆ. ಹೀಗಿದ್ದರೂ ಸಹ ಬೈಕ್ ಟ್ಯಾಕ್ಸಿ ಕೃತಿ ಜೀವನಕ್ಕೆ ಕಡಿವಾಣ ಹಾಕಿರುವುದು ನಮ್ಮ ಬದುಕನ್ನು ಹಳ್ಳಕ್ಕೆ ತಳ್ಳಿದಂತ ಇದೆ ಎಂದು ಬೈಕ್ ಟ್ಯಾಕ್ಸಿ ಚಾಲಕರುಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ಮತ್ತೊಬ್ಬ ಸದಸ್ಯ ಎಂ. ಶಂಕರ್ ಮಾತನಾಡಿ, ಸರ್ಕಾರ ಯಾವುದೇ ತೀರ್ಮಾನಕ್ಕೆ ಬರೆದಿದ್ದಲ್ಲಿ ನಾವು ಜನತಾ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ, ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಆದ್ದರಿಂದ ಸರ್ಕಾರವು ನಮ್ಮ ಬದುಕಿಗೆ ಆಶ್ರಯವಾಗಬೇಕು ಮತ್ತೆ ಬೈಕ್ ಟ್ಯಾಕ್ಸಿ ಓಡಿಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಸಭೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

41 mins ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

50 mins ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

56 mins ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

1 hour ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

6 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

6 hours ago