Birthday Celebration in Public Place: Police Give Moral Lesson to Five Students
ಮೈಸೂರು : ಸಾರ್ವಜನಿಕ ಸ್ಥಳದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ನಾಗರಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಐವರು ಯುವಕರನ್ನು ಕರೆತಂದ ಕೆ.ಆರ್. ಠಾಣಾ ಪೊಲೀಸರು ಅವರಿಗೆ ನೀತಿಪಾಠ ಹೇಳಿ ಕಳುಹಿಸಿದ್ದಾರೆ.
ಬುಧವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಕೃಷ್ಣರಾಜ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಾನುಜ ರಸ್ತೆಯ ನಿವಾಸಿ ಹಾಗೂ ವಿದ್ಯಾರ್ಥಿಯೊಬ್ಬನ ಹುಟ್ಟುಹಬ್ಬ ಆಚರಣೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಯುವಕರ ಗುಂಪು ಕಟ್ಟಿಕೊಂಡು ಜೋರು ಶಬ್ಧದೊಂದಿಗೆ ಕೇಕ್ ಕತ್ತರಿಸಿ ಆಚರಣೆ ಮಾಡಲಾಗಿದೆ.
ಠಾಣೆಯ ಇನ್ಸ್ಪೆಕ್ಟರ್ ಡಿ.ಪಿ.ಧನರಾಜ್ ಅವರಿಗೆ ವಿಚಾರ ಗೊತ್ತಾಗಿದೆ. ತಕ್ಷಣವೇ ಅವರು ತಮ್ಮ ಸಿಬ್ಬಂದಿಯೊಡನೆ ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರು ಬರುವುದನ್ನು ಅರಿತ ಯುವಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಅಷ್ಟಕ್ಕೇ ಸುಮ್ಮನಾಗದ ಇನ್ಸ್ಪೆಕ್ಟರ್ ಧನರಾಜ್, ಗುರುವಾರ ಬೆಳಿಗ್ಗೆ ಸ್ಥಳಕ್ಕೆ ತೆರಳಿ ಸ್ಥಳೀಯರಿಂದ ಮಾಹಿತಿ ಪಡೆಯುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡವರ ವಿವರ ಪಡೆದಿದ್ದಾರೆ. ನಂತರ ಬೀಟ್ ಪೊಲೀಸರ ಮೂಲಕ ಅವರುಗಳನ್ನು ಠಾಣೆಗೆ ಕರೆಸಿದ್ದಾರೆ.
ನಂತರ ಅವರುಗಳು ವಿದ್ಯಾರ್ಥಿಗಳು ಎಂಬ ಅಂಶ ಪೊಲೀಸರಿಗೆ ಗೊತ್ತಾಗಿದೆ. ಅವರುಗಳಿಗೆ ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಕೆಲಹೊತ್ತು ಪಾಠ ಮಾಡಿದ ಪೊಲೀಸರು, ಮುಚ್ಚಳಿಕೆ ಬರೆಸಿಕೊಂಡು, ಮುಂದೆ ಈ ರೀತಿ ವರ್ತಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…