ಮೈಸೂರು ನಗರ

ಸಾರ್ವಜನಿಕ ಸ್ಥಳದಲ್ಲಿ ಹುಟ್ಟುಹಬ್ಬ ಆಚರಣೆ : ಐವರು ವಿದ್ಯಾರ್ಥಿಗಳಿಗೆ ಪೊಲೀಸರ ನೀತಿಪಾಠ

ಮೈಸೂರು : ಸಾರ್ವಜನಿಕ ಸ್ಥಳದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ನಾಗರಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಐವರು ಯುವಕರನ್ನು ಕರೆತಂದ ಕೆ.ಆರ್. ಠಾಣಾ ಪೊಲೀಸರು ಅವರಿಗೆ ನೀತಿಪಾಠ ಹೇಳಿ ಕಳುಹಿಸಿದ್ದಾರೆ.

ಬುಧವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಕೃಷ್ಣರಾಜ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಾನುಜ ರಸ್ತೆಯ ನಿವಾಸಿ ಹಾಗೂ ವಿದ್ಯಾರ್ಥಿಯೊಬ್ಬನ ಹುಟ್ಟುಹಬ್ಬ ಆಚರಣೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಯುವಕರ ಗುಂಪು ಕಟ್ಟಿಕೊಂಡು ಜೋರು ಶಬ್ಧದೊಂದಿಗೆ ಕೇಕ್ ಕತ್ತರಿಸಿ ಆಚರಣೆ ಮಾಡಲಾಗಿದೆ.

ಠಾಣೆಯ ಇನ್‌ಸ್ಪೆಕ್ಟರ್ ಡಿ.ಪಿ.ಧನರಾಜ್ ಅವರಿಗೆ ವಿಚಾರ ಗೊತ್ತಾಗಿದೆ. ತಕ್ಷಣವೇ ಅವರು ತಮ್ಮ ಸಿಬ್ಬಂದಿಯೊಡನೆ ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರು ಬರುವುದನ್ನು ಅರಿತ ಯುವಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಅಷ್ಟಕ್ಕೇ ಸುಮ್ಮನಾಗದ ಇನ್‌ಸ್ಪೆಕ್ಟರ್ ಧನರಾಜ್, ಗುರುವಾರ ಬೆಳಿಗ್ಗೆ ಸ್ಥಳಕ್ಕೆ ತೆರಳಿ ಸ್ಥಳೀಯರಿಂದ ಮಾಹಿತಿ ಪಡೆಯುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡವರ ವಿವರ ಪಡೆದಿದ್ದಾರೆ. ನಂತರ ಬೀಟ್ ಪೊಲೀಸರ ಮೂಲಕ ಅವರುಗಳನ್ನು ಠಾಣೆಗೆ ಕರೆಸಿದ್ದಾರೆ.

ನಂತರ ಅವರುಗಳು ವಿದ್ಯಾರ್ಥಿಗಳು ಎಂಬ ಅಂಶ ಪೊಲೀಸರಿಗೆ ಗೊತ್ತಾಗಿದೆ. ಅವರುಗಳಿಗೆ ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಕೆಲಹೊತ್ತು ಪಾಠ ಮಾಡಿದ ಪೊಲೀಸರು, ಮುಚ್ಚಳಿಕೆ ಬರೆಸಿಕೊಂಡು, ಮುಂದೆ ಈ ರೀತಿ ವರ್ತಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

21 seconds ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

25 mins ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

33 mins ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

2 hours ago

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

3 hours ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

4 hours ago