ಮೈಸೂರು ನಗರ

ಒಳಮೀಸಲಾತಿ ಜಾರಿಗೆ ಪ್ರಯತ್ನ ಆರಂಭಿಸಿದ್ದೇ ಬಿಜೆಪಿ ಸರ್ಕಾರ: ಎನ್.ಮಹೇಶ್‌

ಮೈಸೂರು: ಒಳಮೀಸಲಾತಿ ವಿಚಾರದಲ್ಲಿ ಅಟ್ಟಿಕ್ಕಿದವಳಿಗಿಂತ ಬೊಟ್ಟು ಇಕ್ಕಿದವಳು ಮೇಲು‌ ಎಂಬಂತಾಗಿದೆ ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಪ್ರಯತ್ನಗಳನ್ನು ಆರಂಭಿಸಿದ್ದೇ ಬಿಜೆಪಿ ಸರ್ಕಾರ. ರಾಜ್ಯದಲ್ಲಿ ಬಿಜೆಪಿ ಮೊದಲ ಬಾರಿ ಅಧಿಕಾರಕ್ಕೆ ಬಂದಾಗಲೇ ಒಳ‌ಮೀಸಲಾತಿ ಜಾರಿಗಾಗಿ ಅಧ್ಯಯನ ಮಾಡಲು ಸಮಿತಿಯನ್ನು ರಚಿಸಲಾಗಿತ್ತು. ಆದರೆ ಜಾರಿಯಾಗುವಷ್ಟರಲ್ಲಿ‌ ಚುನಾವಣೆ ಸಮೀಪಿಸಿತ್ತು. ಆ ಬಳಿಕ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿದ್ದರೂ ಒಳ ಮೀಸಲಾತಿ ಜಾರಿಗೆ ಮುಂದಾಗಲಿಲ್ಲ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಒಳ‌ಮೀಸಲಾತಿ ಜಾರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಆದರೂ ಅನುಷ್ಠಾನಕ್ಕೆ ತರಲು ಸಾಧ್ಯವಾಗಲಿಲ್ಲ.

ಬಿಜೆಪಿಯ ಹೋರಾಟದ ಫಲವಾಗಿ ಇದೀಗ ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಬಿಜೆಪಿ ನಡೆಸಿದ ಹೋರಾಟದ ಫಲವನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತಿದೆ. ಇದನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಇದರ ಹೊರತಾಗಿಯೂ ಅಧಿಕೃತ ಆದೇಶ ಹೊರಬಿದ್ದ ನಂತರ ಏನಾಗಲಿದೆ ಎಂದು ಕಾದು ನೋಡಬೇಕಿದೆ. ಏಕೆಂದರೆ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳಿಗೆ ಅನ್ಯಾಯ ಆಗಿದೆ ಎಂಬ ಬಲವಾದ ಕೂಗು ಕೇಳಿಬಂದಿದೆ. ಪರಿಣಾಮ ಆ ಸಮುದಾಯಗಳು ಈಗಾಗಲೇ ಹೋರಾಟ ಆರಂಭಿಸಿವೆ. ಹಾಗಾಗಿ ಅಧಿಕೃತ ಆದೇಶ ಹೊರಬಿದ್ದ ನಂತರ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.

ಇನ್ನು ಒಳಮೀಸಲಾತಿ ಜಾರಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಸ್ಟಾಪ್ ಇಡುವ ಬದಲು ಕಾಮಾ ಇಟ್ಟಿದ್ದಾರೆ. ಒಳ ಮೀಸಲಾತಿ ಜಾರಿಗಾಗಿ ಕಳೆದ 30 ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಇದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಸ್ಟಾಪ್‌ ಇಡುತ್ತಾರೆ ಎಂದು ನಂಬಿದ್ದೆವು. ಆದರೆ ಸಿದ್ದರಾಮಯ್ಯನವರು ಒಳ ಮೀಸಲಾತಿ ಹಂಚಿಕೆ ಮಾಡುವಾಗ ಫುಲ್ ಸ್ಟಾಪ್ ಇಡುವ ಬದಲು ಕಾಮಾ ಹಾಕಿ ಬಿಟ್ಟಿದ್ದಾರೆ ಎಂದು ವಿಶ್ಲೇಷಿಸಿದರು.

ಇನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದನ್ನು‌ ಖಂಡಿಸಿ ನಾಳೆ ರಾಜ್ಯದಾದ್ಯಂತ ಧರ್ಮಸ್ಥಳ ಚಲೋ ಆಂದೋಲನಕ್ಕೆ ಕರೆ ನೀಡಲಾಗಿದೆ
ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಧರ್ಮಸ್ಥಳ‌ ಚಲೋ ಆಂದೋಲನಕ್ಕೆ ಕರೆ ಕೊಡಲಾಗಿದೆ. ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಧರ್ಮಸ್ಥಳ ಚಲೋ ಆಂದೋಲನ ನಡೆಯಲಿದೆ. ರಾಜ್ಯದ ಎಲ್ಲಾ 224 ವಿಧಾನಸಭೆ ಕ್ಷೇತ್ರಗಳಲ್ಲೂ ಧರ್ಮಸ್ಥಳ ಚಲೋ ಆಂದೋಲನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

1 hour ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

1 hour ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

1 hour ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

1 hour ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago