ಮೈಸೂರು ನಗರ

ಬಿಜೆಪಿ ವಿಶ್ವದ ದೊಡ್ಡ ರಾಜಕೀಯ ಪಕ್ಷ : ಎಲ್ ನಾಗೇಂದ್ರ

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಡೆದ ಅಭಿಯಾನದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಅತಿ ದೊಡ್ಡ -ರಾಜಕೀಯ ಪಕ್ಷವಾಗಿರುವ ಬಿಜೆಪಿಯ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ, ಕಾರ್ಯಕರ್ತರು ಪ್ರತಿ ಬೂತಿನಲ್ಲೂ ಸದಸ್ಯತ್ವ ನೋಂದಣಿ ನಡೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕರಾಜ್, ಪ್ರಧಾನ ಕಾರ್ಯದರ್ಶಿ  ಗಿರೀಧರ್, ಬಿ ಎಂ ರಘು, ಉಪಾಧ್ಯಕ್ಷರಾದ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಟಿ ಎನ್ ಶಾಂತ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಸದಸ್ಯತ್ವ ಅಭಿಯಾನದ ಸಂಚಾಲಕರಾದ ವಿಧ್ಯಾಅರಸ್, ಕಾರ್ಯದರ್ಶಿ ನಾಗೇಂದ್ರ ಸಹಾ ಸಂಚಾಲಕರಾದ ಜಾನ್ಸಿ ಹಾಗೂ ಅನಿತ ಮತ್ತು ಮಹಿಳಾ ಮೋರ್ಚಾ ಕ್ಷೇತ್ರಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

21 mins ago

ರೇಸ್‌ಕ್ಲಬ್‌ ಸುತ್ತಮುತ್ತ ಕುದುರೆ ಚಟುವಟಿಕೆಗಳಿಗೆ ನಿರ್ಬಂಧ

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…

59 mins ago

ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…

1 hour ago

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…

2 hours ago

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…

2 hours ago

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

2 hours ago