ಮೈಸೂರು ನಗರ

ಪಾದಯಾತ್ರೆಯಲ್ಲಿ ಭಾಗವಹಿಸಿರುವ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ: ಎಂ.ಕೆ.ಸೋಮಶೇಖರ್‌

ಮೈಸೂರು: ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಅವರ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಮಾಡುತ್ತಿರುವ ಪಾದಯಾತ್ರೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಕಿಡಿಕಾರಿದರು.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು.

ಇವರು ಮಾಡುತ್ತಿರುವ ಪಾದಯಾತ್ರೆ ಬರೀ ಡೋಂಗಿ ಪಾದಯಾತ್ರೆ. ಪಾದಯಾತ್ರೆಗೆ ಜನರನ್ನು ಹಣ ಕೊಟ್ಟು ಕರೆದುಕೊಂಡು ಬರಲಾಗುತ್ತಿದೆ. ಇದು ಎಚ್‌ಡಿಕೆ ಹಾಗೂ ವಿಜಯೇಂದ್ರ ಪ್ರಯೋಜಕತ್ವದ ಪಾದಯಾತ್ರೆ ಎಂದು ಟೀಕೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಬ್ಬ ಪ್ರಾಮಾಣಿಕ ಮುಖ್ಯಮಂತ್ರಿ. ಅವರು ಪಾರದರ್ಶಕ ಆಡಳಿತ ಕೊಡುತ್ತಿರುವ ಸಿಎಂ. ಆದರೆ ವಿನಾ ಕಾರಣ ಸಿದ್ದರಾಮಯ್ಯರ ಮೇಲೆ ಆಪಾದನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ಕಿಡಿಕಾರಿದರು.

ಇನ್ನು ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರೆಲ್ಲಾ ತಮ್ಮ ಬೇನಾಮಿ ಆಸ್ತಿಗಳನ್ನು ಘೋಷಣೆ ಮಾಡಲಿ. ಈ ಮೂಲಕ ಅವರು ಎಷ್ಟು ಪ್ರಾಮಾಣಿಕರು ಎಂಬುದನ್ನು ಸಾಬೀತುಪಡಿಸಿಕೊಳ್ಳಲಿ ಎಂದು ಸವಾಲು ಹಾಕಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಏಳಿಗೆ ಸಹಿಸಲಾಗದೇ ಈ ರೀತಿ ಮಾಡುತ್ತಿದ್ದಾರೆ. ಸಿಎಂ ಕುರ್ಚಿಗೆ ಯಾವುದೇ ಧಕ್ಕೆ ಆಗಲ್ಲ ಎಂದು ಸಿಎಂ ಸಿದ್ದು ಪರ ಬ್ಯಾಟ್‌ ಬೀಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

7 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

8 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

8 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

8 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

8 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

8 hours ago