ಮೈಸೂರು ನಗರ

ಪಾದಯಾತ್ರೆಯಲ್ಲಿ ಭಾಗವಹಿಸಿರುವ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ: ಎಂ.ಕೆ.ಸೋಮಶೇಖರ್‌

ಮೈಸೂರು: ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಅವರ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಮಾಡುತ್ತಿರುವ ಪಾದಯಾತ್ರೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಕಿಡಿಕಾರಿದರು.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು.

ಇವರು ಮಾಡುತ್ತಿರುವ ಪಾದಯಾತ್ರೆ ಬರೀ ಡೋಂಗಿ ಪಾದಯಾತ್ರೆ. ಪಾದಯಾತ್ರೆಗೆ ಜನರನ್ನು ಹಣ ಕೊಟ್ಟು ಕರೆದುಕೊಂಡು ಬರಲಾಗುತ್ತಿದೆ. ಇದು ಎಚ್‌ಡಿಕೆ ಹಾಗೂ ವಿಜಯೇಂದ್ರ ಪ್ರಯೋಜಕತ್ವದ ಪಾದಯಾತ್ರೆ ಎಂದು ಟೀಕೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಬ್ಬ ಪ್ರಾಮಾಣಿಕ ಮುಖ್ಯಮಂತ್ರಿ. ಅವರು ಪಾರದರ್ಶಕ ಆಡಳಿತ ಕೊಡುತ್ತಿರುವ ಸಿಎಂ. ಆದರೆ ವಿನಾ ಕಾರಣ ಸಿದ್ದರಾಮಯ್ಯರ ಮೇಲೆ ಆಪಾದನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ಕಿಡಿಕಾರಿದರು.

ಇನ್ನು ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರೆಲ್ಲಾ ತಮ್ಮ ಬೇನಾಮಿ ಆಸ್ತಿಗಳನ್ನು ಘೋಷಣೆ ಮಾಡಲಿ. ಈ ಮೂಲಕ ಅವರು ಎಷ್ಟು ಪ್ರಾಮಾಣಿಕರು ಎಂಬುದನ್ನು ಸಾಬೀತುಪಡಿಸಿಕೊಳ್ಳಲಿ ಎಂದು ಸವಾಲು ಹಾಕಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಏಳಿಗೆ ಸಹಿಸಲಾಗದೇ ಈ ರೀತಿ ಮಾಡುತ್ತಿದ್ದಾರೆ. ಸಿಎಂ ಕುರ್ಚಿಗೆ ಯಾವುದೇ ಧಕ್ಕೆ ಆಗಲ್ಲ ಎಂದು ಸಿಎಂ ಸಿದ್ದು ಪರ ಬ್ಯಾಟ್‌ ಬೀಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago