bjp leaders are mere critics : mallikarjun kharge
ಮೈಸೂರು: ಬಿಜೆಪಿಯವರು ಯಾವ ಕೆಲಸ ಮಾಡದೇ ಬರೀ ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಿದ್ದರಾಮಯ್ಯ ಮೊದಲ ಪ್ರಾದಾನ್ಯತೆ ಕೊಡುವುದು ಮೈಸೂರಿಗೆ. ಬಿಜೆಪಿಯವರು ಯಾವ ಕೆಲಸ ಮಾಡದೇ ಬರೀ ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರು ಟೀಕಾಚಾರಿಗಳು. ನಾವು ಏನು ಮಾಡಿದ್ದೇವೆ, ಅದು ಜನರ ಮುಂದಿದೆ. ನೀವು ಏನು ಕೆಲಸ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸಿ ಎಂದು ಆರೋಪಿಸಿದರು.
ನೆಹರೂ ಕಾಲದಲ್ಲಿ ಹಾಗೂ ಮಹಾರಾಜರ ಕಾಲದಲ್ಲೂ ದೊಡ್ಡ ದೊಡ್ಡ ಕಾರ್ಖಾನೆಗಳು ಏಳಿಗೆಗೆ ಬಂದಿವೆ. ಮೋದಿಯವರೇ ಹಾಗೂ ಮೋದಿ ಶಿಷ್ಯರೇ ನಿಮ್ಮ ಕೊಡುಗೆ ಏನು ಎಂದು ತಿಳಿಸಿ ಎಂದು ಸವಾಲು ಹಾಕಿದರು.
ಮೋದಿಯವರು ದಿನಾ ಬರೀ ಟಿವಿಯಲ್ಲಿ ಬರುವುದೇ ಆಗಿದೆ. ಆದರೆ ಗಲಭೆ ಎದ್ದಿರುವ ಮಣಿಪುರಕ್ಕೆ ಹೋಗಲು ಇದುವರೆಗೂ ಮೋದಿ ಪ್ರಯತ್ನ ಮಾಡಿಲ್ಲ. ಆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ದೇಶದ ಜನ ಸಂವಿಧಾನ ಬದಲಾವಣೆ ಮಾಡಲು ಬಿಡಲ್ಲ ಎಂದು ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕರಿಗೆ ತಿರುಗೇಟು ನೀಡಿದರು.
ಇನ್ನು ಭಾಷಣದುದ್ದಕ್ಕೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅಹಂಕಾರ ಇದ್ದರೆ ಮನುಷ್ಯ ಒಂದಲ್ಲಾ ಒಂದು ದಿನ ಕೆಳಗೆ ಇಳಿಯಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…