bjp leaders are mere critics : mallikarjun kharge
ಮೈಸೂರು: ಬಿಜೆಪಿಯವರು ಯಾವ ಕೆಲಸ ಮಾಡದೇ ಬರೀ ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಿದ್ದರಾಮಯ್ಯ ಮೊದಲ ಪ್ರಾದಾನ್ಯತೆ ಕೊಡುವುದು ಮೈಸೂರಿಗೆ. ಬಿಜೆಪಿಯವರು ಯಾವ ಕೆಲಸ ಮಾಡದೇ ಬರೀ ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರು ಟೀಕಾಚಾರಿಗಳು. ನಾವು ಏನು ಮಾಡಿದ್ದೇವೆ, ಅದು ಜನರ ಮುಂದಿದೆ. ನೀವು ಏನು ಕೆಲಸ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸಿ ಎಂದು ಆರೋಪಿಸಿದರು.
ನೆಹರೂ ಕಾಲದಲ್ಲಿ ಹಾಗೂ ಮಹಾರಾಜರ ಕಾಲದಲ್ಲೂ ದೊಡ್ಡ ದೊಡ್ಡ ಕಾರ್ಖಾನೆಗಳು ಏಳಿಗೆಗೆ ಬಂದಿವೆ. ಮೋದಿಯವರೇ ಹಾಗೂ ಮೋದಿ ಶಿಷ್ಯರೇ ನಿಮ್ಮ ಕೊಡುಗೆ ಏನು ಎಂದು ತಿಳಿಸಿ ಎಂದು ಸವಾಲು ಹಾಕಿದರು.
ಮೋದಿಯವರು ದಿನಾ ಬರೀ ಟಿವಿಯಲ್ಲಿ ಬರುವುದೇ ಆಗಿದೆ. ಆದರೆ ಗಲಭೆ ಎದ್ದಿರುವ ಮಣಿಪುರಕ್ಕೆ ಹೋಗಲು ಇದುವರೆಗೂ ಮೋದಿ ಪ್ರಯತ್ನ ಮಾಡಿಲ್ಲ. ಆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ದೇಶದ ಜನ ಸಂವಿಧಾನ ಬದಲಾವಣೆ ಮಾಡಲು ಬಿಡಲ್ಲ ಎಂದು ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕರಿಗೆ ತಿರುಗೇಟು ನೀಡಿದರು.
ಇನ್ನು ಭಾಷಣದುದ್ದಕ್ಕೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅಹಂಕಾರ ಇದ್ದರೆ ಮನುಷ್ಯ ಒಂದಲ್ಲಾ ಒಂದು ದಿನ ಕೆಳಗೆ ಇಳಿಯಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…