ಮೈಸೂರು ನಗರ

ಬಿಜೆಪಿ ನಾಯಕರು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ನಾಯಕರು ಬರೀ ಸುಳ್ಳುಗಳನ್ನು ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಸಭೆಗೆ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಬರಬೇಕಿತ್ತು. ಬಂದಿದ್ದರೆ ಏನೆಲ್ಲಾ ಅಭಿವೃದ್ಧಿ ಕಾರ್ಯಕ್ರಮ ನಡೆಯುತ್ತಿವೆ ಎಂದು ಗೊತ್ತಾಗುತ್ತಿತ್ತು. ಮೈಸೂರಿನಲ್ಲಿ ಇವತ್ತು ಒಂದೇ 2578 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ ಎಂದರು.

ಇನ್ನು ಬಿಜೆಪಿಯವರೇ ನೀವು ಸುಳ್ಳು ಆರೋಪಗಳನ್ನು ಮಾಡುತ್ತೀರಿ. ನಿಮಗೆ ಸತ್ಯ ಗೊತ್ತಾಗಬೇಕಾದರೆ, ನೀವೆಲ್ಲರೂ ಒಂದೇ ವೇದಿಕೆಗೆ ಬರಬೇಕು. ಆ ವೇದಿಕೆಯಲ್ಲಿ ಎಲ್ಲಾ ಕುಳಿತು ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಬಿಜೆಪಿ ನಾಯಕರು ಪದೇ ಪದೇ ಹೇಳುತ್ತಿದ್ದಾರೆ. ಹಣ ಇಲ್ಲದಿದ್ದರೆ ಇಂದು ಒಂದೇ ದಿನ 2578 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗುತ್ತಿರಲಿಲ್ಲ ಎಂದು ಹೇಳಿದರು.

ಇನ್ನು ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೆ ವಿನಹ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬರಲಿಲ್ಲ. ಜೆಡಿಎಸ್‌ ವರ್ಷದಿಂದ ವರ್ಷಕ್ಕೆ ಶಾಸಕರ ಸಂಖ್ಯೆಯನ್ನು ಕಡಿಮೆ ಮಾಡಿಕೊಂಡು ಬರುತ್ತಿದೆ. ಸ್ವಂತ ಶಕ್ತಿ ಮೇಲೆ ಜೆಡಿಎಸ್‌ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದಿಂದ ನಾವು ಕೇಂದ್ರಕ್ಕೆ ಕೊಡುತ್ತಿರುವ ತೆರಿಗೆ ನಾಲ್ಕುವರೆ ಲಕ್ಷ ಕೋಟಿ ರೂಪಾಯಿ. ಆದರೆ ನಮಗೆ ಕೇಂದ್ರದಿಂದ ನಮ್ಮ ಪಾಲು ಬರುತ್ತಿರುವುದು ಕೇವಲ 65,000 ಕೋಟಿ ರೂಪಾಯಿ. ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಭಾರೀ ಅನ್ಯಾಯವಾಗುತ್ತಿದೆ. ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ ಅವರ ಮುಂದೆ ನಿಂತುಕೊಳ್ಳಲು ಧೈರ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳನ್ನು ಒಂದು ಸಮುದಾಯಕ್ಕೆ ಕೊಟ್ಟಿಲ್ಲ. ಎಲ್ಲಾ ಸಮುದಾಯಕ್ಕೂ ನಾವು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಪ್ರಧಾನಿ ಮೋದಿ ಅವರು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲಿದೆ ಎಂದು ಆರೋಪ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಗ್ಯಾರಂಟಿ ಯೋಜನೆ ಅತ್ಯಂತ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…

50 mins ago

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…

1 hour ago

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

3 hours ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

3 hours ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

3 hours ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

3 hours ago