ಮೈಸೂರು ನಗರ

ಬಿಜೆಪಿ ನಾಯಕರು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ನಾಯಕರು ಬರೀ ಸುಳ್ಳುಗಳನ್ನು ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಸಭೆಗೆ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಬರಬೇಕಿತ್ತು. ಬಂದಿದ್ದರೆ ಏನೆಲ್ಲಾ ಅಭಿವೃದ್ಧಿ ಕಾರ್ಯಕ್ರಮ ನಡೆಯುತ್ತಿವೆ ಎಂದು ಗೊತ್ತಾಗುತ್ತಿತ್ತು. ಮೈಸೂರಿನಲ್ಲಿ ಇವತ್ತು ಒಂದೇ 2578 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ ಎಂದರು.

ಇನ್ನು ಬಿಜೆಪಿಯವರೇ ನೀವು ಸುಳ್ಳು ಆರೋಪಗಳನ್ನು ಮಾಡುತ್ತೀರಿ. ನಿಮಗೆ ಸತ್ಯ ಗೊತ್ತಾಗಬೇಕಾದರೆ, ನೀವೆಲ್ಲರೂ ಒಂದೇ ವೇದಿಕೆಗೆ ಬರಬೇಕು. ಆ ವೇದಿಕೆಯಲ್ಲಿ ಎಲ್ಲಾ ಕುಳಿತು ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಬಿಜೆಪಿ ನಾಯಕರು ಪದೇ ಪದೇ ಹೇಳುತ್ತಿದ್ದಾರೆ. ಹಣ ಇಲ್ಲದಿದ್ದರೆ ಇಂದು ಒಂದೇ ದಿನ 2578 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗುತ್ತಿರಲಿಲ್ಲ ಎಂದು ಹೇಳಿದರು.

ಇನ್ನು ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೆ ವಿನಹ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬರಲಿಲ್ಲ. ಜೆಡಿಎಸ್‌ ವರ್ಷದಿಂದ ವರ್ಷಕ್ಕೆ ಶಾಸಕರ ಸಂಖ್ಯೆಯನ್ನು ಕಡಿಮೆ ಮಾಡಿಕೊಂಡು ಬರುತ್ತಿದೆ. ಸ್ವಂತ ಶಕ್ತಿ ಮೇಲೆ ಜೆಡಿಎಸ್‌ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದಿಂದ ನಾವು ಕೇಂದ್ರಕ್ಕೆ ಕೊಡುತ್ತಿರುವ ತೆರಿಗೆ ನಾಲ್ಕುವರೆ ಲಕ್ಷ ಕೋಟಿ ರೂಪಾಯಿ. ಆದರೆ ನಮಗೆ ಕೇಂದ್ರದಿಂದ ನಮ್ಮ ಪಾಲು ಬರುತ್ತಿರುವುದು ಕೇವಲ 65,000 ಕೋಟಿ ರೂಪಾಯಿ. ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಭಾರೀ ಅನ್ಯಾಯವಾಗುತ್ತಿದೆ. ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ ಅವರ ಮುಂದೆ ನಿಂತುಕೊಳ್ಳಲು ಧೈರ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳನ್ನು ಒಂದು ಸಮುದಾಯಕ್ಕೆ ಕೊಟ್ಟಿಲ್ಲ. ಎಲ್ಲಾ ಸಮುದಾಯಕ್ಕೂ ನಾವು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಪ್ರಧಾನಿ ಮೋದಿ ಅವರು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲಿದೆ ಎಂದು ಆರೋಪ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಗ್ಯಾರಂಟಿ ಯೋಜನೆ ಅತ್ಯಂತ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago