ಮೈಸೂರು: ಬಳ್ಳಾರಿ ಕೇಸನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮೊದಲು ಯಾವ ಯಾವ ಕೇಸ್ ಸಿಬಿಐ ಕೊಟ್ಟಿದ್ದಾರೆ ಹೇಳಲಿ. ಈ ಹಿಂದೆ ಅವರು ಅಧಿಕಾರಿಗಳಿದ್ದಾಗ ಯಾವ ಕೇಸ್ ಕೊಟ್ಟಿದ್ರು. ಅವರಿಗೆ ಯಾವ ನೈತಿಕ ಹಕ್ಕಿದೆ. ಈ ಹಿಂದೆ ನಾವು ಡಿಮ್ಯಾಂಡ್ ಮಾಡಿದ್ವಿ. ಒಂದು ಕೇಸ್ ಕೂಡ ಸಿಬಿಐಗೆ ಕೊಡಲಿಲ್ಲ. ಈ ಹಿಂದೆ ನಾನು 8 ಕೇಸ್ ಸಿಬಿಐ ಕೊಟ್ಟಿದ್ದೇನೆ. ಜಾರ್ಜ್ ಕೇಸ್, ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟೆ. ಬಿಜೆಪಿ ಯಾವ ಕೇಸ್ ಕೊಟ್ಟಿದ್ದಾರೆ? ಬಿಜೆಪಿ ನಾಯಕರಿಗೆ ಸಂಸ್ಕೃತಿ ಇಲ್ಲ. ಏಕವಚನ ಬಳಸಿ ಮಾತನಾಡುತ್ತಾರೆ. ಈ ಹಿಂದೆ ರೆಡ್ಡಿಗೆ ಬಳ್ಳಾರಿಗೆ ಯಾಕೆ ಬರಬೇಡಿ ಅಂತ ಹೇಳಿತ್ತು. ರಿಪಬ್ಲಿಕ್ ಆಫ್ ಬಳ್ಳಾರಿ ಯಾವಾಗ ಆಯ್ತು? ಸಂತೋಷ್ ಹೆಗ್ಡೆ ಏನು ವರದಿ ಕೊಟ್ಟಿದ್ರು. ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಸರ್ವಾಧಿಕಾರದಲ್ಲಿ ನಂಬಿಕೆಯಿದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ನಮಗೆ ಪ್ರಚಾರಕ್ಕೆ ಅವಕಾಶ ಕೊಟ್ಟಿಲ್ಲ. ಈ ಹಿಂದೆ ನನಗೆ, ಸಿ.ಎಂ ಇಬ್ರಾಹಿಂಗೆ ಪ್ರಚಾರ ಮಾಡಲು ಅವಕಾಶ ಕೊಟ್ಟಿರಲಿಲ್ಲ. ಒಂದು ಕುರುಬರ ದೇವಸ್ಥಾನದಲ್ಲಿ ಪ್ರಚಾರ ಮಾಡಿದ್ದೆ. ಗೂಂಡಾಗಿರಿ ಮಾಡ್ತಾ ಇದ್ರು ಅವರಿಂದ ನಾವು ಪಾಠ ಕಲಿಬೇಕಾ? ಎಂದು ಬಿಜೆಪಿ ಹಾಗೂ ರೆಡ್ಡಿ ಬ್ರದರ್ಸ್ ವಿರುದ್ಧ ಕಿಡಿಕಾರಿದರು.
ಇನ್ನು ವಿಷೇಶ ಜಂಟಿ ಅಧಿವೇಶನಕ್ಕೆ ಬಿಜೆಪಿ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಸೆಂಬ್ಲಿ ಶುರು ಆದಾಗ ಜಂಟಿ ಅಧಿವೇಶನ ಮಾಡೋದು ಪ್ರಕ್ರಿಯೆ. ಬಿಜೆಪಿಯವರು ನರೇಗಾ ಹಾಳು ಮಾಡಲು ಹೊರಟಿದ್ದಾರೆ. ಅದಕ್ಕಾಗಿ ವಿಶೇಷ ಅಧಿವೇಶನ ಕರೆಯುತ್ತಿದ್ದೇವೆ. ಅಧಿವೇಶನದಲ್ಲಿ ಎಲ್ಲರ ಜೊತೆ ಚರ್ಚೆ ಮಾಡುತ್ತೇನೆ. ಜಿ ರಾಮ್ ಜಿ ಮಾಡಿ ಬಡವರನ್ನು ಹಾಳು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ರೇಡ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಬಕಾರಿ ಸಚಿವರ ಹೆಸರು ಇರುವ ಬಗ್ಗೆ ಗೊತ್ತಿಲ್ಲ. ಲೋಕಾಯುಕ್ತ ಅವರ ಕೆಲಸ ಮಾಡಲಿ ಎಂದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…