ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ ಮಂಡನೆಯು ಎದುರಾಳಿ ಮಣಿಸುವ ತಂತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರದ ಅವಧಿ ಮುಕ್ತಾಯವಾಗುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದರು.
ಜಾತಿಗಣತಿ ವೈಜ್ಞಾನಿಕವಾಗಿಲ್ಲ. ಇದನ್ನ ಸ್ವತಃ ತಮ್ಮ ಪಕ್ಷದ ಶಾಸಕರು, ಸಚಿವರೇ ಒಪ್ಪುತ್ತಿಲ್ಲ. ಹೀಗಿದ್ದರು ಜಾತಿಗಣತಿ ವರದಿ ಜಾರಿಗೆ ತರುತ್ತಿರುವ ಉದ್ದೇಶ ಬೇರೆಯೇ ಇದೆ ಎಂದು ಹೇಳಿದರು.
ಜಾತಿಗಣತಿ ವರದಿ ಮಂಡನೆ ಮೂಲಕ ಎಲ್ಲರ ಗಮನ ಬೇರೆಡೆ ಸೆಳೆದು ಕಾಂಗ್ರೆಸ್ ತನ್ನ ಹಗರಣಗಳನ್ನು ಮರೆಮಾಚುವ ಕೆಲಸ ಮಾಡುತ್ತಿದೆ. ಜಾತಿಗಣತಿ ವರದಿ ಸೋರಿಕೆ ಒಂದು ಟೆಸ್ಟ್ ಡೋಸ್ ಅಷ್ಟೇ ಎಂದು ವ್ಯಂಗ್ಯವಾಡಿದರು.
ಇದೊಂದು ಅವಜ್ಞಾನಿಕ ವರದಿಯಾಗಿದ್ದು, ಮುಂದೆ ಸರ್ಕಾರದ ವಿರುದ್ಧ ಸಾಧು ಸಂತರು, ಸಾಹಿತಿಗಳು ಹೊರಟಕ್ಕೆ ಇಳಿಯಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಗೋಕಾಕ್ ಮಾದರಿ ಚಳುವಳಿ ನಡೆಯಲಿದೆ ಎಂದು ಹೇಳಿದರು.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…