ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ ಮಂಡನೆಯು ಎದುರಾಳಿ ಮಣಿಸುವ ತಂತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರದ ಅವಧಿ ಮುಕ್ತಾಯವಾಗುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದರು.
ಜಾತಿಗಣತಿ ವೈಜ್ಞಾನಿಕವಾಗಿಲ್ಲ. ಇದನ್ನ ಸ್ವತಃ ತಮ್ಮ ಪಕ್ಷದ ಶಾಸಕರು, ಸಚಿವರೇ ಒಪ್ಪುತ್ತಿಲ್ಲ. ಹೀಗಿದ್ದರು ಜಾತಿಗಣತಿ ವರದಿ ಜಾರಿಗೆ ತರುತ್ತಿರುವ ಉದ್ದೇಶ ಬೇರೆಯೇ ಇದೆ ಎಂದು ಹೇಳಿದರು.
ಜಾತಿಗಣತಿ ವರದಿ ಮಂಡನೆ ಮೂಲಕ ಎಲ್ಲರ ಗಮನ ಬೇರೆಡೆ ಸೆಳೆದು ಕಾಂಗ್ರೆಸ್ ತನ್ನ ಹಗರಣಗಳನ್ನು ಮರೆಮಾಚುವ ಕೆಲಸ ಮಾಡುತ್ತಿದೆ. ಜಾತಿಗಣತಿ ವರದಿ ಸೋರಿಕೆ ಒಂದು ಟೆಸ್ಟ್ ಡೋಸ್ ಅಷ್ಟೇ ಎಂದು ವ್ಯಂಗ್ಯವಾಡಿದರು.
ಇದೊಂದು ಅವಜ್ಞಾನಿಕ ವರದಿಯಾಗಿದ್ದು, ಮುಂದೆ ಸರ್ಕಾರದ ವಿರುದ್ಧ ಸಾಧು ಸಂತರು, ಸಾಹಿತಿಗಳು ಹೊರಟಕ್ಕೆ ಇಳಿಯಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಗೋಕಾಕ್ ಮಾದರಿ ಚಳುವಳಿ ನಡೆಯಲಿದೆ ಎಂದು ಹೇಳಿದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…