ಮೈಸೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಆಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ಏನೂ ಇಲ್ಲ. ಈ ಬಾರಿಯೂ ಮೈಸೂರಿಗೆ ಏನು ವಿಶೇಷ ಯೋಜನೆ ನೀಡಿಲ್ಲ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಬಜೆಟ್ ಮಂಡಿಸಿದ್ದಾರೆ. ಮುಸ್ಲಿಂಮರಿಗೆ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಈ ಸರ್ಕಾರದಿಂದ ಏನನ್ನೂ ನಿರೀಕ್ಷೆ ಮಾಡಲು ಸಾದ್ಯವಿಲ್ಲ ಎಂದು ರಾಜ್ಯ ಬಜೆಟ್ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಇಡಿ ಸಮನ್ಸ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕೋರ್ಟ್ನಲ್ಲಿ ಸಮನ್ಸ್ ರದ್ದಾಗಿದೆ. ಇಡಿ ಅಧಿಕಾರಿಗಳು ಮೇಲ್ಮನವಿ ಸಲ್ಲಿಸುತ್ತಾರೆ. ಯಾವುದೇ ಕಾರಣಕ್ಕೂ ಮುಡಾ ಹಗರಣ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಾವು ಸುಪ್ರೀಂಕೋರ್ಟ್ಗೆ ಬೇಕಾದ್ರೂ ಹೋಗ್ತೀವಿ. ಮುಡಾ ಹಗರಣ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…