ಮೈಸೂರು: ನಾವು ಕೂಡ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಕಾಂಗ್ರೆಸ್ಗೆ ಎಚ್ಚರಿಕೆ ನೀಡಿದರು.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್ ಉದ್ದೇಶ. ಏಕೆಂದರೆ ನಾವು ತಾಲಿಬಾನಿಗಳ ರೀತಿ ಅವರಿಗೆ ಉತ್ತರ ಕೊಡುವುದಿಲ್ಲ. ಒಂದು ವೇಳೆ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಕಿಡಿಕಾರಿದರು.
ಇನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಮೊದಲು ಈ ರೀತಿ ಇರಲಿಲ್ಲ. ಮೊದಲು ಇದೇ ರೀತಿ ಇದ್ದಿದ್ದರೆ ಎಂಟು ಬಾರಿ ಅವರು ಗೆಲ್ಲುತ್ತಿರಲಿಲ್ಲ. ಈಗ ಕಾಂಗ್ರೆಸ್ ಪಕ್ಷ ತಮ್ಮ ನಿಲುವನ್ನು ಅವರ ಬಾಯಿಯಿಂದ ಹೇಳಿಸುತ್ತಿದೆ. ಸಿಎಂ ಕೂಡ ಅದನ್ನು ಸಮರ್ಥಿಸಿಕೊಂಡಿದ್ದಾರೆ. ಹಾಗಾದರೇ ಕಾಂಗ್ರೆಸ್ನವರು ಹಜ್ ಯಾತ್ರೆಗೆ ಯಾಕೆ ದುಡ್ಡು ಕೊಡುತ್ತಾರೆ. ಹಜ್ ಯಾತ್ರೆಗೆ ಹೋದರೆ ಬಡತನ ನಿರ್ಮೂಲನೆಯಾಗುತ್ತಾ ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹಜ್ ಯಾತ್ರೆಗೆ ಯಾಕೆ ಸರ್ಕಾರ ದುಡ್ಡು ಕೊಡಬೇಕು. ಕೂಡಲೇ ಹಜ್ ಯಾತ್ರೆಯ ಸಬ್ಸಿಡಿ ನಿಲ್ಲಿಸಿಬಿಡಿ ನೋಡೋಣ. ನೀವು ನಮ್ಮನ್ನು ಕೆಣಕಿದ್ದಕ್ಕೆ ನಾವು ಇದನ್ನು ಕೇಳುತ್ತಿದ್ದೇವೆ. ಕುಂಭಮೇಳಕ್ಕೆ ಯಾರನ್ನೂ ಒತ್ತಡದಿಂದ ಕರೆಯುತ್ತಿಲ್ಲ. ಎಲ್ಲರೂ ಅವರ ನಂಬಿಕೆಯಿಂದ ಹೋಗುತ್ತಿದ್ದಾರೆ. ಅದನ್ನು ಯಾಕೆ ನೀವು ಪ್ರಶ್ನೆ ಮಾಡುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…