ಮೈಸೂರು ನಗರ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ

ಮೈಸೂರು: ನಾವು ಕೂಡ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದರು.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್‌ ಉದ್ದೇಶ. ಏಕೆಂದರೆ ನಾವು ತಾಲಿಬಾನಿಗಳ ರೀತಿ ಅವರಿಗೆ ಉತ್ತರ ಕೊಡುವುದಿಲ್ಲ. ಒಂದು ವೇಳೆ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಕಿಡಿಕಾರಿದರು.

ಇನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಮೊದಲು ಈ ರೀತಿ ಇರಲಿಲ್ಲ. ಮೊದಲು ಇದೇ ರೀತಿ ಇದ್ದಿದ್ದರೆ ಎಂಟು ಬಾರಿ ಅವರು ಗೆಲ್ಲುತ್ತಿರಲಿಲ್ಲ. ಈಗ ಕಾಂಗ್ರೆಸ್‌ ಪಕ್ಷ ತಮ್ಮ ನಿಲುವನ್ನು ಅವರ ಬಾಯಿಯಿಂದ ಹೇಳಿಸುತ್ತಿದೆ. ಸಿಎಂ ಕೂಡ ಅದನ್ನು ಸಮರ್ಥಿಸಿಕೊಂಡಿದ್ದಾರೆ. ಹಾಗಾದರೇ ಕಾಂಗ್ರೆಸ್‌ನವರು ಹಜ್‌ ಯಾತ್ರೆಗೆ ಯಾಕೆ ದುಡ್ಡು ಕೊಡುತ್ತಾರೆ. ಹಜ್‌ ಯಾತ್ರೆಗೆ ಹೋದರೆ ಬಡತನ ನಿರ್ಮೂಲನೆಯಾಗುತ್ತಾ ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಹಜ್‌ ಯಾತ್ರೆಗೆ ಯಾಕೆ ಸರ್ಕಾರ ದುಡ್ಡು ಕೊಡಬೇಕು. ಕೂಡಲೇ ಹಜ್‌ ಯಾತ್ರೆಯ ಸಬ್ಸಿಡಿ ನಿಲ್ಲಿಸಿಬಿಡಿ ನೋಡೋಣ. ನೀವು ನಮ್ಮನ್ನು ಕೆಣಕಿದ್ದಕ್ಕೆ ನಾವು ಇದನ್ನು ಕೇಳುತ್ತಿದ್ದೇವೆ. ಕುಂಭಮೇಳಕ್ಕೆ ಯಾರನ್ನೂ ಒತ್ತಡದಿಂದ ಕರೆಯುತ್ತಿಲ್ಲ. ಎಲ್ಲರೂ ಅವರ ನಂಬಿಕೆಯಿಂದ ಹೋಗುತ್ತಿದ್ದಾರೆ. ಅದನ್ನು ಯಾಕೆ ನೀವು ಪ್ರಶ್ನೆ ಮಾಡುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

1 hour ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

1 hour ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

1 hour ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

1 hour ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

11 hours ago