ಮೈಸೂರು: ಕೆಆರ್ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಪಾಲಿಕೆ ವಿರುದ್ಧ ಬಿಜೆಪಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಮೈಸೂರು ಪಾಲಿಕೆ ವಿರುದ್ಧ ಮೌನ ಪ್ರತಿಭಟನೆ ನಡೆಸಿದ ಮೈಸೂರು ನಗರ ಬಿಜೆಪಿ ಘಟಕವು, ಯಾವುದೇ ಕಾರಣಕ್ಕೂ ಕೆಆರ್ಎಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ಮರುನಾಮಕರಣ ಮಾಡಬಾರದು. ಒಂದು ವೇಳೆ ಸಿದ್ದರಾಮಯ್ಯ ಹೆಸರಿಟ್ಟರೆ ಮುಂದಿನ ದಿನಗಳಲ್ಲೂ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹಾಗಾಗಿ ಈ ವಿಚಾರವನ್ನು ಇಲ್ಲಿಗೆ ಕೈಬಿಡಬೇಕು ಎಂದು ಆಗ್ರಹಿಸಿದೆ.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಎಲ್.ನಾಗೇಂದ್ರ, ಮಹದೇವಸ್ವಾಮಿ, ಮಾಜಿ ಮೇಯರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಪ್ರತಿಭಟನೆ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…