ಮೈಸೂರು: ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿಂದು ರಾಜ್ಯ ಬಜೆಟ್ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರಾಮಸ್ವಾಮಿ ವೃತ್ತದಿಂದ ಜಿಲ್ಲಾ ಪಂಚಾಯಿತಿ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ನೂರಾರು ಬಿಜೆಪಿ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಹಲಾಲ್ ಬಜೆಟ್, ನಿರಾಸದಾಯಕ ಬಜೆಟ್. ಈ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…
ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್ನ ಕೊರಿಡಾಂಗ್…
ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…