ಮೈಸೂರು: ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿಂದು ರಾಜ್ಯ ಬಜೆಟ್ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರಾಮಸ್ವಾಮಿ ವೃತ್ತದಿಂದ ಜಿಲ್ಲಾ ಪಂಚಾಯಿತಿ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ನೂರಾರು ಬಿಜೆಪಿ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಹಲಾಲ್ ಬಜೆಟ್, ನಿರಾಸದಾಯಕ ಬಜೆಟ್. ಈ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…