cm siddhramiah
ಮೈಸೂರು: ಬಿಜೆಪಿಯವರು ಮಾಡುವ ಯಾತ್ರೆ ಧರ್ಮಯಾತ್ರೆಯಲ್ಲ, ಅದು ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಎನ್.ಐ.ಎ ತನಿಖೆ ಮಾಡಿಸಿ ಅಂತ ಹೇಳ್ತಾರೆ. ನಮ್ಮ ಪೊಲೀಸರ ಮೇಲೆ ಬಿಜೆಪಿಗೆ ನಂಬಿಕೆ ಇಲ್ವಾ? ಬಿಜೆಪಿ ಮೊದಲು ತನಿಖೆ ಮಾಡಿ ಅಂತ ಹೇಳಲೇ ಇಲ್ಲ. ಡೆಡ್ ಬಾಡಿ ಸಿಗದೆ ಹೋದ ಮೇಲೆ ಹೇಳಿಕೆ ಕೊಡಲು ಶುರು ಮಾಡಿದ್ರು. ವೀರೇಂದ್ರ ಹೆಗಡೆ ಅವರೇ ಸ್ವಾಗತ ಮಾಡಿದ್ದಾರೆ. ಅವರ ಮೇಲೆ ಆರೋಪವಿದೆ. ಆದರೆ ಅವರೆ ಸ್ವಾಗತ ಮಾಡಿದ್ದಾರೆ. ನಾವು ತನಿಖೆ ಮಾಡಿಸುತ್ತಿದ್ದೇವೆ. ಯಾರು ಕೂಡ ನಾನು ಇಂಟರ್ ಫಿಯರ್ ಆಗಿಲ್ಲ ಎಂದರು.
ಇನ್ನು ವಿದೇಶದಿಂದ ಫಂಡಿಂಗ್ ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದುಡ್ಡು ಬಂದಿರೋದು ಬಿಜೆಪಿಗೆ. ಇಷ್ಟೆಲ್ಲಾ ಮಾಡ್ತಿದ್ದಾರೆ ಎಲ್ಲಿಂದ ದುಡ್ಡು ಬರುತ್ತೆ? ಯಾರು ಕೊಡೋರು ಇವರಿಗೆ. ಎಲ್ಲಾ ವಿಚಾರಗಳನ್ನು ರಾಜಕೀಯ ಮಾಡಬಾರದು. ವಿರೋಧ ಪಕ್ಷ ಟೀಕೆ ಮಾಡಲಿ. ಇವರು ರಾಜಕೀಯಕ್ಕೆ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಸೌಜನ್ಯ ಕೇಸ್ ರಿ ಓಪನ್ ಆಗುತ್ತಾ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಬಿಐ ತನಿಖೆ ಮಾಡಿ ವರದಿ ಕೊಟ್ಟಿದೆ. ಸೌಜನ್ಯ ಕುಟುಂಬ ಸುಪ್ರೀಂ ಕೋರ್ಟ್ಗೆ ಹೋಗಲಿ. ಸೌಜನ್ಯ ಕೇಸ್ ಆರೋಪ ಬಂದಿರೋದು ವೀರೇಂದ್ರ ಹೆಗಡೆ ಕುಟುಂಬದ ಮೇಲೆ. ಬಿಜೆಪಿಯವರು ಯಾರ ಪರ? ಕೋರ್ಟ್ಗೆ ಹೋಗೋದು ಬಿಡೋದು ಸೌಜನ್ಯ ಕುಟುಂಬದವರಿಗೆ ಸೇರಿದ್ದು. ಬಿಜೆಪಿಯವರು ಒಂದು ಕಡೆ ವೀರೇಂದ್ರ ಹೆಗಡೆಗೆ ಜೈ ಅಂತಾರೆ. ಇನ್ನೊಂದು ಕಡೆ ಸೌಜನ್ಯ ಪರ ಅಂತಾರೆ. ಇದರಲ್ಲೂ ರಾಜಕೀಯ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಲೇಖಕಿ ಬಾನು ಮುಸ್ತಾಕ್ ದಸರಾ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂರಿಸಿ ಮೆರವಣಿಗೆ ಮಾಡಿದರು. ಅವಾಗ ಆರ್.ಎಸ್.ಎಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ರು? ನಿಸ್ಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ರು ಅವಾಗ ಎಲ್ಲಿ ಹೋಗಿದ್ರು? ಅರಿಶಿನ ಕುಂಕುಮ ಬಗ್ಗೆ ಮಾತನಾಡಿರೋದು ಬೇರೆ. ಕನ್ನಡದ ಮೇಲೆ ಪ್ರೀತಿ ಇಲ್ಲದೆ ಇದ್ದರೆ ಪುಸ್ತಕ ಬರಿತಿದ್ರಾ? ಆಕೆ ಮುಸ್ಲಿಂ ಲೇಡಿ ಕನ್ನಡದಲ್ಲಿ ಬರೆದಿದ್ದಾರೆ. ಈಗ ಬೇರೆ ಧರ್ಮದವರು ಅದು ಮಾಡಿ ಇದು ಮಾಡಿ ಅನ್ನೋಕಾಗುತ್ತಾ? ಎಂದು ಪ್ರಶ್ನೆ ಮಾಡಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…