ಮೈಸೂರು ನಗರ

ಬಿಜೆಪಿಯದ್ದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ಬಿಜೆಪಿಯವರು ಮಾಡುವ ಯಾತ್ರೆ ಧರ್ಮಯಾತ್ರೆಯಲ್ಲ, ಅದು ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಎನ್.ಐ.ಎ ತನಿಖೆ ಮಾಡಿಸಿ ಅಂತ ಹೇಳ್ತಾರೆ. ನಮ್ಮ ಪೊಲೀಸರ ಮೇಲೆ ಬಿಜೆಪಿಗೆ ನಂಬಿಕೆ ಇಲ್ವಾ? ಬಿಜೆಪಿ ಮೊದಲು ತನಿಖೆ ಮಾಡಿ ಅಂತ ಹೇಳಲೇ ಇಲ್ಲ. ಡೆಡ್ ಬಾಡಿ ಸಿಗದೆ ಹೋದ ಮೇಲೆ ಹೇಳಿಕೆ ಕೊಡಲು ಶುರು ಮಾಡಿದ್ರು. ವೀರೇಂದ್ರ ಹೆಗಡೆ ಅವರೇ ಸ್ವಾಗತ ಮಾಡಿದ್ದಾರೆ. ಅವರ ಮೇಲೆ ಆರೋಪವಿದೆ. ಆದರೆ ಅವರೆ ಸ್ವಾಗತ ಮಾಡಿದ್ದಾರೆ. ನಾವು ತನಿಖೆ ಮಾಡಿಸುತ್ತಿದ್ದೇವೆ. ಯಾರು ಕೂಡ ನಾನು ಇಂಟರ್ ಫಿಯರ್ ಆಗಿಲ್ಲ ಎಂದರು.

ಇನ್ನು ವಿದೇಶದಿಂದ ಫಂಡಿಂಗ್ ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದುಡ್ಡು ಬಂದಿರೋದು ಬಿಜೆಪಿಗೆ. ಇಷ್ಟೆಲ್ಲಾ ಮಾಡ್ತಿದ್ದಾರೆ ಎಲ್ಲಿಂದ ದುಡ್ಡು ಬರುತ್ತೆ? ಯಾರು ಕೊಡೋರು ಇವರಿಗೆ. ಎಲ್ಲಾ ವಿಚಾರಗಳನ್ನು ರಾಜಕೀಯ ಮಾಡಬಾರದು. ವಿರೋಧ ಪಕ್ಷ ಟೀಕೆ ಮಾಡಲಿ. ಇವರು ರಾಜಕೀಯಕ್ಕೆ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಸೌಜನ್ಯ ಕೇಸ್ ರಿ ಓಪನ್ ಆಗುತ್ತಾ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಬಿಐ ತನಿಖೆ ಮಾಡಿ ವರದಿ ಕೊಟ್ಟಿದೆ. ಸೌಜನ್ಯ ಕುಟುಂಬ ಸುಪ್ರೀಂ ಕೋರ್ಟ್ಗೆ ಹೋಗಲಿ. ಸೌಜನ್ಯ ಕೇಸ್ ಆರೋಪ ಬಂದಿರೋದು ವೀರೇಂದ್ರ ಹೆಗಡೆ ಕುಟುಂಬದ ಮೇಲೆ. ಬಿಜೆಪಿಯವರು ಯಾರ ಪರ? ಕೋರ್ಟ್‌ಗೆ ಹೋಗೋದು ಬಿಡೋದು ಸೌಜನ್ಯ ಕುಟುಂಬದವರಿಗೆ ಸೇರಿದ್ದು. ಬಿಜೆಪಿಯವರು ಒಂದು ಕಡೆ ವೀರೇಂದ್ರ ಹೆಗಡೆಗೆ ಜೈ ಅಂತಾರೆ. ಇನ್ನೊಂದು ಕಡೆ ಸೌಜನ್ಯ ಪರ ಅಂತಾರೆ. ಇದರಲ್ಲೂ ರಾಜಕೀಯ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಲೇಖಕಿ ಬಾನು ಮುಸ್ತಾಕ್ ದಸರಾ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂರಿಸಿ ಮೆರವಣಿಗೆ ಮಾಡಿದರು. ಅವಾಗ ಆರ್.ಎಸ್.ಎಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ರು? ನಿಸ್ಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ರು ಅವಾಗ ಎಲ್ಲಿ ಹೋಗಿದ್ರು? ಅರಿಶಿನ ಕುಂಕುಮ ಬಗ್ಗೆ ಮಾತನಾಡಿರೋದು ಬೇರೆ. ಕನ್ನಡದ ಮೇಲೆ ಪ್ರೀತಿ ಇಲ್ಲದೆ ಇದ್ದರೆ ಪುಸ್ತಕ ಬರಿತಿದ್ರಾ? ಆಕೆ ಮುಸ್ಲಿಂ ಲೇಡಿ ಕನ್ನಡದಲ್ಲಿ ಬರೆದಿದ್ದಾರೆ. ಈಗ ಬೇರೆ ಧರ್ಮದವರು ಅದು ಮಾಡಿ ಇದು ಮಾಡಿ ಅನ್ನೋಕಾಗುತ್ತಾ? ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

19 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

19 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

19 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

19 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

19 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago