ಮೈಸೂರು: ಗುರುಪೂರ್ಣಿಮೆಯ ಅಂಗವಾಗಿ ಮೈಸೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಮೈಸೂರಿನ ಟಿ.ಕೆ.ಲೇಔಟ್ನಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ಆಯೋಜಿಸಿದ್ದ ಶಿಬಿರಕ್ಕೆ ಹಿರಿಯ ವಕೀಲ ಕೆ.ಆರ್.ಶಿವಶಂಕರ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಗುರು-ಶಿಷ್ಯರ ಸಂಬಂಧ ಅನಾದಿ ಕಾಲದಿಂದಲೂ ಇದೆ. ಜ್ಞಾನದ ಭಂಡಾರವಾಗಿರುವ ಗುರುವಿನ ಬಳಿ ಕಲಿತ ವಿದ್ಯೆ ಅತ್ಯಂತ ಶ್ರೇಷ್ಠ.
ಬೆಳಕು ಹರಿಸಿ ವ್ಯಕ್ತಿಯನ್ನು ಸುಜ್ಞಾನದ ಕಡೆ ಕೊಂಡೊಯ್ಯುವ ಮಹಾನ್ ದೈವಿಯೇ ಗುರು. ಸನಾತನ ಧರ್ಮ ಸಂಸ್ಕೃತಿಯಲ್ಲಿ ತಂದೆ-ತಾಯಿ ನಂತರದ ಸ್ಥಾನವನ್ನು ಗುರುವಿಗೆ ನೀಡಲಾಗಿದೆ. ಗುರುಗಳು ಪರಮಾತ್ಮನ ಅವತಾರ ರೂಪವಾಗಿದ್ದಾರೆ ಎಂದು ಗುರುಗಳ ಮಹತ್ವವನ್ನು ಸಾರಿ ಸಾರಿ ಹೇಳಿದರು.
ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಜನರು ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಸದ್ಬಳಕೆ ಮಾಡಿಕೊಂಡರು. 30 ಜನ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.
ಇದೇ ಸಂದರ್ಭದಲ್ಲಿ ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ್ ಅಯ್ಯಂಗಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…