ಮೈಸೂರು ನಗರ

ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್‌ ಬ್ಲಾಸ್ಟ್‌ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ? ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದರು.

ಇದನ್ನು ಓದಿ: ಕಾರು ಬಾಂಬ್‌ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ

ಪತ್ರಕರ್ತರ ಈ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು. ಬಾಂಬ್ ಬ್ಲಾಸ್ಟ್‌ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ ಎಂದರು.

ಇನ್ನು ಭಾರತವನ್ನು ಒಂದು ಧರ್ಮದ ದೇಶ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಭಾರತ ಸಂವಿಧಾನಬದ್ಧ ಬಹುತ್ವದ ದೇಶ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕರಾದ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನವೆಂಬರ್.15ರಂದು ದೆಹಲಿಗೆ ಹೋಗುತ್ತಿದ್ದೇನೆ. ಅವತ್ತೇ ವಾಪಸ್ ಬರುವ ಅಂದಾಜಿದೆ. ಹೈಕಮಾಂಡ್ ಸಮಯ ಕೊಟ್ಟರೆ ಭೇಟಿ ಆಗ್ತೀನಿ ಅಷ್ಟೆ. ಇನ್ನೂ ಹೈ‌ಕಮಾಂಡ್ ಸಮಯ ಕೇಳಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

37 mins ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

39 mins ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

41 mins ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

50 mins ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

53 mins ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

58 mins ago