ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಪೊಲೀಸರ ತಪಾಸಣೆಯ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ.
ಭಾನುವಾರ ಬೆಳಿಗ್ಗೆ ನಗರದ ನಜರಬಾದ್ನಲ್ಲಿರುವ ಹೋಟೆಲ್ ಜೆಪಿ ಫಾರ್ಚೂನ್ ಹಾಗೂ ಜೆಎಲ್ಬಿ ರಸ್ತೆಯಲ್ಲಿರುವ ಮೆಟ್ರೋಪೋಲ್ ಹೋಟೆಲ್ ಗುರಿಯಾಗಿಸಿ ಬೆದರಿಕೆ ಇ-ಮೇಲ್ ಬಂದಿದೆ. ಸಂದೇಶದಲ್ಲಿ ತಮಿಳುನಾಡಿನಲ್ಲಿರುವ ನನ್ನ ಕುಟುಂಬಕ್ಕೆ ಅನ್ಯಾಯವಾಗಿದ್ದು, ಅದರ ಸೇಡನ್ನು ತೀರಿಸಿಕೊಳ್ಳಲು ಈ ಕೃತ್ಯಕ್ಕೆ ಮುಂದಾಗಿದ್ದೇನೆ ಎಂದು ಉಲ್ಲೇಖಿಸಿದ್ದಾನೆ.
ತಮಿಳುನಾಡಿನ ಅನಂತಮ್ ಅರಿಯಪ್ಪನ್ ಎಂಬ ಹೆಸರಿನಲ್ಲಿ ಈ ಇ-ಮೇಲ್ ಬಂದಿದೆ. ಎರಡೂ ಹೋಟೆಲ್ಗಳಲ್ಲಿ ಬಾಂಬ್ ಸ್ಛೋಟ ನಡೆಸುವುದಾಗಿ ಆತ ಎಚ್ಚರಿಕೆ ನೀಡಿದ್ದನು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೊದಲಿಗೆ ಹೋಟೆಲ್ಗಳ ಹೊರ ಆವರಣದಲ್ಲಿ ಶ್ವಾನದಳದ ಮೂಲಕ ತಪಾಸಣೆ ನಡೆಸಲಾಯಿತು. ನಂತರ ಹೋಟೆಲ್ನಲ್ಲಿ ಇದ್ದ ಅತಿಥಿಗಳನ್ನು ಹೊರಗೆ ಕಳುಹಿಸಿ ಒಳ ಆವರಣದಲ್ಲಿ ಸಂಪೂರ್ಣ ತಪಾಸಣೆ ನಡೆಸಲಾಯಿತು.
ಮುನ್ನೆಚ್ಚರಿಕೆ ಕ್ರಮವಾಗಿ ಹೋಟೆಲ್ಗಳ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಇ-ಮೇಲ್ನ ಮೂಲ ಪತ್ತೆ ಹಚ್ಚಲು ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದು, ಇದು ನಿಜವಾದ ಬೆದರಿಕೆಯೋ ಅಥವಾ ಕಿಡಿಗೇಡಿಗಳ ಕೃತ್ಯವೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಸದ್ಯ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…