ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಪೊಲೀಸರ ತಪಾಸಣೆಯ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ.
ಭಾನುವಾರ ಬೆಳಿಗ್ಗೆ ನಗರದ ನಜರಬಾದ್ನಲ್ಲಿರುವ ಹೋಟೆಲ್ ಜೆಪಿ ಫಾರ್ಚೂನ್ ಹಾಗೂ ಜೆಎಲ್ಬಿ ರಸ್ತೆಯಲ್ಲಿರುವ ಮೆಟ್ರೋಪೋಲ್ ಹೋಟೆಲ್ ಗುರಿಯಾಗಿಸಿ ಬೆದರಿಕೆ ಇ-ಮೇಲ್ ಬಂದಿದೆ. ಸಂದೇಶದಲ್ಲಿ ತಮಿಳುನಾಡಿನಲ್ಲಿರುವ ನನ್ನ ಕುಟುಂಬಕ್ಕೆ ಅನ್ಯಾಯವಾಗಿದ್ದು, ಅದರ ಸೇಡನ್ನು ತೀರಿಸಿಕೊಳ್ಳಲು ಈ ಕೃತ್ಯಕ್ಕೆ ಮುಂದಾಗಿದ್ದೇನೆ ಎಂದು ಉಲ್ಲೇಖಿಸಿದ್ದಾನೆ.
ತಮಿಳುನಾಡಿನ ಅನಂತಮ್ ಅರಿಯಪ್ಪನ್ ಎಂಬ ಹೆಸರಿನಲ್ಲಿ ಈ ಇ-ಮೇಲ್ ಬಂದಿದೆ. ಎರಡೂ ಹೋಟೆಲ್ಗಳಲ್ಲಿ ಬಾಂಬ್ ಸ್ಛೋಟ ನಡೆಸುವುದಾಗಿ ಆತ ಎಚ್ಚರಿಕೆ ನೀಡಿದ್ದನು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೊದಲಿಗೆ ಹೋಟೆಲ್ಗಳ ಹೊರ ಆವರಣದಲ್ಲಿ ಶ್ವಾನದಳದ ಮೂಲಕ ತಪಾಸಣೆ ನಡೆಸಲಾಯಿತು. ನಂತರ ಹೋಟೆಲ್ನಲ್ಲಿ ಇದ್ದ ಅತಿಥಿಗಳನ್ನು ಹೊರಗೆ ಕಳುಹಿಸಿ ಒಳ ಆವರಣದಲ್ಲಿ ಸಂಪೂರ್ಣ ತಪಾಸಣೆ ನಡೆಸಲಾಯಿತು.
ಮುನ್ನೆಚ್ಚರಿಕೆ ಕ್ರಮವಾಗಿ ಹೋಟೆಲ್ಗಳ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಇ-ಮೇಲ್ನ ಮೂಲ ಪತ್ತೆ ಹಚ್ಚಲು ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದು, ಇದು ನಿಜವಾದ ಬೆದರಿಕೆಯೋ ಅಥವಾ ಕಿಡಿಗೇಡಿಗಳ ಕೃತ್ಯವೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಸದ್ಯ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…