ಮೈಸೂರು: ಬಂಡೀಪುರ, ನಾಗರಹೊಳೆ ಸೇರಿದಂತೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿಂದ ಸುತ್ತುವರಿದಿರುವ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕಂಡಿದೆ ಎಂದು ಸಂಶೋಧನಾ ವರದಿಯಲ್ಲಿ ಬಹಿರಂಗವಾಗಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಗ್ರೀನ್ ಪೀಸ್ ಸಂಶೋಧನಾ ವರದಿಯು, ವಾಯು ಮಾಲಿನ್ಯದಿಂದ ನಗರದ ಜನತೆಯ ಆರೋಗ್ಯದ ಮೇಲೆ ಬೀರುವ ಗಂಭೀರ ಪರಿಣಾಮಗಳ ಬಗ್ಗೆ ಸವಿವರವಾಗಿ ಹೇಳಿದೆ.
ಇನ್ನು ರಾಜ್ಯದ ಪ್ರಮುಖ ನಗರಗಳಾದ ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಆದ್ದರಿಂದ ಕೂಡಲೇ ವಾಯು ಮಾಲಿನ್ಯ ತಗ್ಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇದು ನಮ್ಮ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದೆ.
ಗ್ರೀನ್ ಪೀಸ್ ಸಂಶೋಧನಾ ವರದಿಯು ಹತ್ತು ನಗರಗಳಲ್ಲಿ ಅಧ್ಯಯನ ಮಾಡಿ ವರದಿ ಮಾಡಿದ್ದು, ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಿದೆ.
ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.
ಈ ಹಿನ್ನೆಲೆಯಲ್ಲಿ ಜನತೆ ಕೂಡ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಅತಿಹೆಚ್ಚು ವಾಹನಗಳ ಓಡಾಟದ ಸ್ಥಳದಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…