ಮೈಸೂರು ನಗರ

ಹೆಣ್ಣುಮಕ್ಕಳನ್ನು ಕಾಲೇಜಿಗೆ ಕರೆತನ್ನಿ: ಶಾಸಕ ಕೆ.ಹರಿಶ್‌ಗೌಡ

ಪಾದಯಾತ್ರೆ ಬಳಿಕ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ. ಹರೀಶ್ ಗೌಡ ಸಲಹೆ

ಕುಂಬಾರಕೊಪ್ಪಲು ಸರಕಾರಿ ಪಿಯು ಕಾಲೇಜಿನ 2 ಕೊಠಡಿ ಉದ್ಘಾಟನೆ

ಮೈಸೂರು: ಕುಂಬಾರಕೊಪ್ಪಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರವೇಶಾತಿ ಹೆಚ್ಚಿಸಲು ವಿಶೇಷ ನೋಂದಣಿ ಅಭಿಯಾನ ಆರಂಭಿಸಿ, ಮುಖ್ಯವಾಗಿ ಹೆಣ್ಣುಮಕ್ಕಳನ್ನು ಕಾಲೇಜಿಗೆ ಸೇರಿಸಿ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಸಲಹೆ ನೀಡಿದರು.

ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ. 4 ರ ಹೆಬ್ಬಾಳು ಲೋಕನಾಯಕ ನಗರದಲ್ಲಿ ಸೋಮವಾರ ಪಾದಯಾತ್ರೆ ನಡೆಸಿ ಕುಂದುಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದ ಬಳಿಕ ಕುಂಬಾರಕೊಪ್ಪಲು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಎರಡು ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಕುಂಬಾರಕೊಪ್ಪಲಿನ ಜನತೆ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಈ ಕಾಲೇಜಿಗೆ ಜಾಗ ನೀಡಿದ್ದಾರೆ. ಕಲೆ, ವಾಣಿಜ್ಯ ವಿಷಯದಲ್ಲಿ ಪಿಯುಸಿ ಅಧ್ಯಯನಕ್ಕೆ ಅವಕಾಶವಿದೆ. ಅಂತೆಯೆ ಈ ಕಾಲೇಜಿನ ಸುತ್ತ ಏಳು ವಾರ್ಡ್ಗಳಿದ್ದು ಕೇವಲ 65 ವಿದ್ಯಾರ್ಥಿಗಳು ಮಾತ್ರ ಪ್ರವೇಶಾತಿ ಪಡೆದಿರುವುದು ಬೇಸರದ ಸಂಗತಿ. ನಾನು ಕಾಲೇಜಿಗೆ ಬೇಕಾದ ಎಲ್ಲಾ ರೀತಿ ಸೌಲಭ್ಯಗಳನ್ನು ನೀಡಲು ಸಿದ್ದನಿದ್ದೇನೆ. ಕಾಲೇಜಿನ ಸಿಬ್ಬಂದಿಗಳು ವಿಶೇಷ ಅಭಿಯಾನದ ಮೂಲಕ ಕಾಲೇಜು ವ್ಯಾಪ್ತಿಯಲ್ಲಿರುವ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಈ ಕಾಲೇಜಿಗೆ ಪ್ರವೇಶಾತಿ ಪಡೆಯುವಂತೆ ಮನವೊಲಿಸಬೇಕು. ಈ ನಿಟ್ವಿನಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು 600 ಕ್ಕೆ ಏರಿಕೆ ಮಾಡಬೇಕೆಂದು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ನಗರ ಪ್ರದೇಶದ ಕಾಲೇಜಿನಲ್ಲಿ ಸೇರಿಕೊಂಡು ಅಧ್ಯಯನ ಮಾಡಲು ಉಳಿದುಕೊಳ್ಳಲು ಜಾಗವಿಲ್ಲದೇ ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಇದರಿಂದ ಹೆಣ್ಣುಮಕ್ಕಳು ಅವಕಾಶ ವಂಚಿತರಾಗುತ್ತಾರೆ. ಆದರೆ ನಗರ ಪ್ರದೇಶದ ಮಕ್ಕಳಿಗೆ ಈ ರೀತಿ ಆಗಬಾರದು ಆ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಎಸ್ಎಸ್ಎಲ್ಸಿ ನಂತರ ಶಿಕ್ಷಣ ಮೊಟಕುಗೊಳಿಸುವುದನ್ನು ತಪ್ಪಿಸಿ ಎಂದು ತಿಳಿಸಿದರು.

ಕುಂಬಾರಕೊಪ್ಪಲು ಸರಕಾರಿ ಪದವಿಪೂರ್ವ ಕಾಲೇಜಿಗೆ ಕೊಳವೆ ಬಾವಿ ಮಂಜೂರಾಗಿದೆ. ಶಾಸಕರ ಅನುದಾನದಲ್ಲಿಯೇ ರಂಗಮಂದಿರ ಕಟ್ಟಿಸಿಕೊಡುತ್ತೇವೆ. ಮಾತ್ರವಲ್ಲದೇ ಹೆಣ್ಣುಮಕ್ಕಳಿಗೆ ಶೌಚಾಲಯ ನಿರ್ಮಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

ಪಾಲಿಕೆ ಮಾಜಿ ಸದಸ್ಯ ಪೈಲ್ವಾನ್ ಶ್ರೀನಿವಾಸ್, ಡಿಡಿಪಿಯು ಎಂ.ಮರಿಸ್ವಾಮಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ರವಿ ಮಂಚೇಗೌಡನಕೊಪ್ಪಲು, ಮುಖಂಡರಾದ ನಾಗಣ್ಣ, ಮಹೇಶ್, ಅನೀಲ್, ಪ್ರಾಂಶುಪಾಲ ಶಿವಕುಮಾರ್ ಹಾಗೂ ಇತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

6 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

7 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

7 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

8 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

8 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

9 hours ago