ಮೈಸೂರು: ಗ್ಯಾರಂಟಿ ಯೋಜನೆಗಳ ನೆರವು ಮತ್ತು ಆಧಾರದೊಂದಿಗೆ ಸಮಾಜದ ಎಲ್ಲಾ ಸಮುದಾಯಗಳ ಸರ್ವಾಂಗಿಣ ಅಭಿವೃದ್ದಿಗಾಗಿ ಕಲ್ಯಾಣ ರಾಜ್ಯ ಕಟ್ಟುವ ಮುಖ್ಯಮಂತ್ರಿಯವರ ಕನಸು ಈ ಬಜೆಟ್ ಮೂಲಕ ನನಸಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ.ವೆಂಕಟೇಶ್ ಹೇಳಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕಂಡ ಜನತೆಯ ನೋವು, ಅಸಮಾನತೆ ನಿವಾರಿಸಲು ತಮ್ಮ 16ನೇ ಬಜೆಟ್ನಲ್ಲಿ ಶ್ರಮ ಹಾಕಿರುವುದು ಎದ್ದು ಕಾಣುತ್ತಿದೆ. ಈ ಬಜೆಟ್ ಗಾತ್ರದಲ್ಲಿಯೂ, ಗುರಿಯಲ್ಲಿಯೂ ದೊಡ್ಡದಾಗಿದೆ. ಒಬ್ಬ ಯಶಸ್ವಿ ಆಡಳಿತಗಾರನ ದೂರದೃಷ್ಠಿ ಅಭಿವೃದ್ದಿಗೆ ಅನುಗುಣವಾಗಿ ಈ ಬಜೆಟ್ ಇದೆ ಎಂದು ತಿಳಿಸಿದರು.
ಈ ಬಜೆಟ್ ಕುರಿತು ವಿಪಕ್ಷಗಳ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಒಳ್ಳೆಯ ಯೋಜನೆಗಳು, ಅಂಶಗಳನ್ನು ಶ್ಲಾಘಿಸಬೇಕು ಎನ್ನುವ ಕನಿಷ್ಠ ಮಾನವೀಯ ಪ್ರಜ್ಞೆ ಇಲ್ಲದಂತೆ ಇವರ ಹೇಳಿಕೆಗಳು ಹಾಸ್ಯಸ್ಪದ. ಆದರೆ, ಜನತೆ ಈ ಬಜೆಟ್ ಅನ್ನು ಸಂಪೂರ್ಣವಾಗಿ ಸ್ವಾಗತಿಸಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ತಾರತಮ್ಯದ ನಡುವೆಯೂ ಬೇರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದ ಅಭಿವೃದ್ದಿಯ ವೇಗವು ಹೆಚ್ಚಿದೆ ಎನ್ನುವುದನ್ನು ಸಿಎಂ ಈ ಬಜೆಟ್ ಮೂಲಕ ಸಾಬೀತು ಮಾಡಿದ್ದಾರೆ.
ಕೃಷಿ, ಕೈಗಾರಿಕೆ, ಗ್ರಾಮೀಣಾಭಿವೃದ್ದಿ, ಎಸ್ಸಿ/ಎಸ್ಟಿ ಅಭಿವೃದ್ದಿ, ಅಲ್ಪ ಸಂಖ್ಯಾತರ ಅಭಿವೃದ್ದಿ, ನೀರಾವಿ ಅಭಿವೃದ್ದಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಅತ್ಯುತ್ತಮ ಎನಿಸುವ ಯೋಜನೆಗಳನ್ನು ಈ ಬಜೆಟ್ನಲ್ಲಿ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಹೆಚ್.ಎ.ವೆಂಕಟೇಶ್ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…