ಮೈಸೂರು ನಗರ

ಕಲ್ಯಾಣ ರಾಜ್ಯ ನಿರ್ಮಿಸುವ ಬಜೆಟ್‌: ಹೆಚ್‌.ಎ. ವೆಂಕಟೇಶ್‌

ಮೈಸೂರು: ಗ್ಯಾರಂಟಿ ಯೋಜನೆಗಳ ನೆರವು ಮತ್ತು ಆಧಾರದೊಂದಿಗೆ ಸಮಾಜದ ಎಲ್ಲಾ ಸಮುದಾಯಗಳ ಸರ್ವಾಂಗಿಣ ಅಭಿವೃದ್ದಿಗಾಗಿ ಕಲ್ಯಾಣ ರಾಜ್ಯ ಕಟ್ಟುವ ಮುಖ್ಯಮಂತ್ರಿಯವರ ಕನಸು ಈ ಬಜೆಟ್‌ ಮೂಲಕ ನನಸಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್‌.ಎ.ವೆಂಕಟೇಶ್‌ ಹೇಳಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕಂಡ ಜನತೆಯ ನೋವು, ಅಸಮಾನತೆ ನಿವಾರಿಸಲು ತಮ್ಮ 16ನೇ ಬಜೆಟ್‌ನಲ್ಲಿ ಶ್ರಮ ಹಾಕಿರುವುದು ಎದ್ದು ಕಾಣುತ್ತಿದೆ. ಈ ಬಜೆಟ್‌ ಗಾತ್ರದಲ್ಲಿಯೂ, ಗುರಿಯಲ್ಲಿಯೂ ದೊಡ್ಡದಾಗಿದೆ. ಒಬ್ಬ ಯಶಸ್ವಿ ಆಡಳಿತಗಾರನ ದೂರದೃಷ್ಠಿ ಅಭಿವೃದ್ದಿಗೆ ಅನುಗುಣವಾಗಿ ಈ ಬಜೆಟ್‌ ಇದೆ ಎಂದು ತಿಳಿಸಿದರು.

ಈ ಬಜೆಟ್‌ ಕುರಿತು ವಿಪಕ್ಷಗಳ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಒಳ್ಳೆಯ ಯೋಜನೆಗಳು, ಅಂಶಗಳನ್ನು ಶ್ಲಾಘಿಸಬೇಕು ಎನ್ನುವ ಕನಿಷ್ಠ ಮಾನವೀಯ ಪ್ರಜ್ಞೆ ಇಲ್ಲದಂತೆ ಇವರ ಹೇಳಿಕೆಗಳು ಹಾಸ್ಯಸ್ಪದ. ಆದರೆ, ಜನತೆ ಈ ಬಜೆಟ್‌ ಅನ್ನು ಸಂಪೂರ್ಣವಾಗಿ ಸ್ವಾಗತಿಸಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ತಾರತಮ್ಯದ ನಡುವೆಯೂ ಬೇರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದ ಅಭಿವೃದ್ದಿಯ ವೇಗವು ಹೆಚ್ಚಿದೆ ಎನ್ನುವುದನ್ನು ಸಿಎಂ ಈ ಬಜೆಟ್‌ ಮೂಲಕ ಸಾಬೀತು ಮಾಡಿದ್ದಾರೆ.

ಕೃಷಿ, ಕೈಗಾರಿಕೆ, ಗ್ರಾಮೀಣಾಭಿವೃದ್ದಿ, ಎಸ್‌ಸಿ/ಎಸ್‌ಟಿ ಅಭಿವೃದ್ದಿ, ಅಲ್ಪ ಸಂಖ್ಯಾತರ ಅಭಿವೃದ್ದಿ, ನೀರಾವಿ ಅಭಿವೃದ್ದಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಅತ್ಯುತ್ತಮ ಎನಿಸುವ ಯೋಜನೆಗಳನ್ನು ಈ ಬಜೆಟ್‌ನಲ್ಲಿ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಹೆಚ್‌.ಎ.ವೆಂಕಟೇಶ್‌ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

12 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

13 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

13 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

15 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

15 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

16 hours ago