ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ಬಳಿ ಆಗಮಿಸಿರುವ ಪೋಷಕರು, ತಮ್ಮ ಮಕ್ಕಳನ್ನು ನೋಡುವ ತವಕದಲ್ಲಿದ್ದಾರೆ. ಶಾಲೆಯ ಮುಂಭಾಗ ಕಣ್ಣೀರು ಹಾಕುತ್ತಿರುವ ಪೋಷಕರು, ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಲಕ ಕುಡಿದು ಬಸ್ ಚಲಾಯಿಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಚಾಲಕನ ಅಜಾಗರೂಕತೆಯಿಂದಲೇ ಘಟನೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನು ಓದಿ: ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ ಪ್ರಕರಣ: ಮಕ್ಕಳಿಗಾಗಿ ಮೈಸೂರಿನಲ್ಲಿ ಕಾಯುತ್ತಿರುವ ಪೋಷಕರು
ಇನ್ನು ಶಾಲಾ ಪ್ರವಾಸಕ್ಕೆ ಖಾಸಗಿ ಬಸ್ ವ್ಯವಸ್ಥೆ ಮಾಡಿದ್ದ ಶಾಲಾ ಆಡಳಿತ ಮಂಡಳಿ ವಿರುದ್ಧವೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರವಾರ ಜಿಲ್ಲಾಡಳಿತವು ಉಳಿದ ಮಕ್ಕಳಿಗೆ ಮೈಸೂರಿಗೆ ತಲುಪಲು ಬಸ್ ವ್ಯವಸ್ಥೆ ಮಾಡಿದ್ದು, ಇಂದು 12 ಗಂಟೆ ವೇಳೆಗೆ ಅಲ್ಲಿಂದ ಮಕ್ಕಳು ಹೊರಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿಯ ಮೃತದೇಹ ಇಂದು ಸಂಜೆ ಮೈಸೂರಿಗೆ ಆಗಮಿಸುವ ಸಾಧ್ಯತೆಯಿದೆ.
ಘಟನೆ ವಿವರ: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…