ಮೈಸೂರು ನಗರ

ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ ಪ್ರಕರಣ: ಚಾಲಕನ ವಿರುದ್ಧ ಪೋಷಕರ ಆಕ್ರೋಶ

ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಚಾಲಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ಬಳಿ ಆಗಮಿಸಿರುವ ಪೋಷಕರು, ತಮ್ಮ ಮಕ್ಕಳನ್ನು ನೋಡುವ ತವಕದಲ್ಲಿದ್ದಾರೆ. ಶಾಲೆಯ ಮುಂಭಾಗ ಕಣ್ಣೀರು ಹಾಕುತ್ತಿರುವ ಪೋಷಕರು, ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಲಕ ಕುಡಿದು ಬಸ್‌ ಚಲಾಯಿಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಚಾಲಕನ ಅಜಾಗರೂಕತೆಯಿಂದಲೇ ಘಟನೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿ: ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ ಪ್ರಕರಣ: ಮಕ್ಕಳಿಗಾಗಿ ಮೈಸೂರಿನಲ್ಲಿ ಕಾಯುತ್ತಿರುವ ಪೋಷಕರು

ಇನ್ನು ಶಾಲಾ ಪ್ರವಾಸಕ್ಕೆ ಖಾಸಗಿ ಬಸ್‌ ವ್ಯವಸ್ಥೆ ಮಾಡಿದ್ದ ಶಾಲಾ ಆಡಳಿತ ಮಂಡಳಿ ವಿರುದ್ಧವೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರವಾರ ಜಿಲ್ಲಾಡಳಿತವು ಉಳಿದ ಮಕ್ಕಳಿಗೆ ಮೈಸೂರಿಗೆ ತಲುಪಲು ಬಸ್ ವ್ಯವಸ್ಥೆ ಮಾಡಿದ್ದು, ಇಂದು 12 ಗಂಟೆ ವೇಳೆಗೆ ಅಲ್ಲಿಂದ ಮಕ್ಕಳು ಹೊರಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿಯ ಮೃತದೇಹ ಇಂದು ಸಂಜೆ ಮೈಸೂರಿಗೆ ಆಗಮಿಸುವ ಸಾಧ್ಯತೆಯಿದೆ.

ಘಟನೆ ವಿವರ: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್‌ ಬಳಿ ಭಾನುವಾರ ಸಂಜೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

59 mins ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

1 hour ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

1 hour ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

4 hours ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

16 hours ago