ಉಪಚುನಾವಣೆ ಸೋಲು: ಶಾಸಕ ಶ್ರೀವತ್ಸ ಬೇಸರ

ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸೋಲು ಉಂಟಾಗಿರುವುದು ಬೇಸರ ತಂದಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.

ಈ ಕುರಿತು ಇಂದು(ನ.23) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದಲ್ಲಿ ಈ ಮಟ್ಟಕ್ಕೆ ಮುಖಭಂಗ ಆಗುತ್ತೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಬಿಜೆಪಿ ಹಾಗೂ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆಂಬ ನಿರೀಕ್ಷೆಯಿತ್ತು. ಆದರೆ ಹಗರಣಗಳನ್ನು ನಡೆಸಿರುವ ಕಾಂಗ್ರೆಸ್‌ ಪಕ್ಷವೇ ಗೆಲುವು ಸಾಧಿಸಿದೆ ಎಂದರೇ ಅಶ್ಷರ್ಯವಾಗಿದೆ ಎಂದಿದ್ದಾರೆ.

ಉಪಚುನಾವಣೆಯ ಮೂಲಕ ನಮ್ಮ ಪಕ್ಷದಲ್ಲಿ ನಾವೆಲ್ಲಿ ಎಡವಿದ್ದೀವಿ ಎಂದು ಅವಲೋಕನ ಮಾಡಿಕೊಳ್ಳಬೇಕಿದೆ. ಮುಂದಿನ ಮೂರುವರೆ ವರ್ಷಗಳಲ್ಲಿ ಎಚ್ಚರಿಕೆ ಹೆಜ್ಜೆಯನ್ನಿಟ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ, ಬಣ ರಾಜಕೀಯ ಎಲ್ಲವನ್ನ ಬಿಟ್ಟು ನಾವು ಒಂದಾಗಿ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಈಗ ಕಾಂಗ್ರೆಸ್‌ ಗೆಲುವು ಸಾಧಿಸಿರುವುದಕ್ಕೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಪರಿಣಾಮ ಬೀರಿರಬಹುದು. ಅಲ್ಲದೇ ಈ ಗೆಲುವು ಸರ್ಕಾರದ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

11 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

16 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

16 hours ago