ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸೋಲು ಉಂಟಾಗಿರುವುದು ಬೇಸರ ತಂದಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.
ಈ ಕುರಿತು ಇಂದು(ನ.23) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದಲ್ಲಿ ಈ ಮಟ್ಟಕ್ಕೆ ಮುಖಭಂಗ ಆಗುತ್ತೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಬಿಜೆಪಿ ಹಾಗೂ ಎನ್ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆಂಬ ನಿರೀಕ್ಷೆಯಿತ್ತು. ಆದರೆ ಹಗರಣಗಳನ್ನು ನಡೆಸಿರುವ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸಿದೆ ಎಂದರೇ ಅಶ್ಷರ್ಯವಾಗಿದೆ ಎಂದಿದ್ದಾರೆ.
ಉಪಚುನಾವಣೆಯ ಮೂಲಕ ನಮ್ಮ ಪಕ್ಷದಲ್ಲಿ ನಾವೆಲ್ಲಿ ಎಡವಿದ್ದೀವಿ ಎಂದು ಅವಲೋಕನ ಮಾಡಿಕೊಳ್ಳಬೇಕಿದೆ. ಮುಂದಿನ ಮೂರುವರೆ ವರ್ಷಗಳಲ್ಲಿ ಎಚ್ಚರಿಕೆ ಹೆಜ್ಜೆಯನ್ನಿಟ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ, ಬಣ ರಾಜಕೀಯ ಎಲ್ಲವನ್ನ ಬಿಟ್ಟು ನಾವು ಒಂದಾಗಿ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಈಗ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಪರಿಣಾಮ ಬೀರಿರಬಹುದು. ಅಲ್ಲದೇ ಈ ಗೆಲುವು ಸರ್ಕಾರದ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…