ಮೈಸೂರು : ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್ ರನ್ನ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಹಳ್ಳಿಹಕ್ಕಿ, ಹೆಲಿಕಾಷ್ಟರ್ ನಲ್ಲಿ ಬಂದು ಪೊಲೀಸ್ ಭದ್ರತೆಯಲ್ಲಿ ಸಭೆ ಮಾಡಿ ಹೋಗುತ್ತಾನೆ. ಸಭೆಯ ಬಳಿಕ ಅದು ಕ್ಯಾನ್ಸಲ್ ಮಾಡಿದ್ದೀನಿ. ಅದು ಮಾಡಿದ್ದೀನಿ, ಇದು ಮಾಡಿದ್ದೀನಿ ಎಂದು ಹೇಳ್ತಾನೆ. ಒಂದಕ್ಕಾದ್ರೂ ಆದೇಶ ಬಂದಿದಿಯಾ..? ಬರಿ ಬೊಗಳೆ ಬಿಡುತ್ತಾನೆ. ನೀನು ಯಾವನಲೇ ..? ನೀನು ದಡ್ಡನೋ ಬುದ್ದಿವಂತನಾ..? ನಾನು ಏಳು ಸೈಟ್ ಕೇಳಿದ್ದೇನೆ ಅಂತೀಯಲ್ಲ. ಇವ್ನು ಯಾವನ್ರೀ ಎಂದು ಏಕವಚನದಲ್ಲೆ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೆ ನಾನು ಪ್ರಾಮಾಣಿಕ ಅಂತ ವಿಧಾನಸೌಧದ ಒಳಗೆ ಹೇಳಿದ್ದೀನಿ. ಈ ಭೈರತಿ ಸುರೇಶ್ ಚೇಂಜ್ ಆಫ್ ಲ್ಯಾಂಡ್ ಗೆ ಐದು ಲಕ್ಷ ಫಿಕ್ಸ್ ಮಾಡಿದ್ದಾನೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…